Wednesday, February 4, 2026

ಪೋಲೀಸ್ ಕಸ್ಟಡಿಯಲ್ಲಿ ಆರೋಪಿ ಡೆತ್: ಪ್ರಕರಣ ಸಿ.ಒ.ಡಿ.ತನಿಖೆಗೆ

ಬಂಟ್ವಾಳ: ಪೋಲೀಸ್ ವಶದಲ್ಲಿರುವಾಗಲೇ ಆರೋಪಿ ನದಿಗೆ ಹಾರಿ ಆತ್ಮಹತ್ಯೆ ಮಾಡಿದ ಪ್ರಕರಣ ಸಿ.ಒ.ಡಿ.ತನಿಖೆಗೆ.

ಪತ್ನಿ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ಕರೆತರುವಾಗ ಕೂಳೂರು ಸೇತುವೆ ಮೇಲಿಂದ ನದಿಗೆ ಆರೋಪಿ ಜಿಗಿದು ಮೃತಪಟ್ಟ ಪ್ರಕರಣ ಸಿ.ಒ.ಡಿ.ತನಿಖೆ ಮಾಡುವಂತೆ ಸರಕಾರ ಅದೇಶ ನೀಡಿದೆ.
ಸರಕಾರದ ಆದೇಶದ ಮೇಲೆ ಸಿ.ಒ.ಡಿ.ಪೋಲೀಸರು ಬಂದರು ಠಾಣೆಗೆ ಅಗಮಿಸಿ ದೂರುದಾರರು ಮತ್ತು ಪೋಲೀಸರ ತನಿಖೆ ಆರಂಬಿಸಿದ್ದಾರೆ.

ಘಟನೆಯ ವಿವರ : ಮಂಗಳೂರಿನ ಕುದ್ರೋಳಿ ನಿವಾಸಿ ಮುನೀರ್ (42) ಎಂಬಾತ ಪತ್ನಿ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದರು ಪೋಲೀಸರು ಪೊಲೀಸ್ ಠಾಣೆಗೆ ಕರೆತರುವಾಗ ಕೂಳೂರು ಸೇತುವೆ ಮೇಲಿಂದ ನದಿಗೆ ಆರೋಪಿ ಜಿಗಿದು ಮೃತಪಟ್ಟಿದ್ದ.

ಮುನೀರ್ ತನ್ನ ಪತ್ನಿ ಮೇಲೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಮಂಗಳೂರು ಉತ್ತರ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿಯು ಆಟೋ ರಿಕ್ಷಾವೊಂದರಲ್ಲಿ ಹಳೆಯಂಗಡಿ ಸಮೀಪ ಬರುತ್ತಿದ್ದ ವೇಳೆ ಅನುಮಾನಗೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಯನ್ನು ಅದೇ ಆಟೋದಲ್ಲಿ ಮಂಗಳೂರಿನ ಬಂದರು ಠಾಣೆಗೆ ಕರೆತರುವಾಗ ಕೂಳೂರು ಸೇತುವೆ ಬಳಿ ಮೂತ್ರ ಬಂದಿದೆ.
ಕೆಳಗಿಳಿಯಬೇಕು ಎಂದು ಹೇಳಿದ್ದಾನೆ. ಆಟೋದಿಂದ ಕೆಳಗಿಳಿದ ತಕ್ಷಣವೇ ಆರೋಪಿ ಸೇತುವೆ ಮೇಲಿಂದ ನದಿಗೆ ಹಾರಿದ್ದಾನೆ.
ಸೇತುವೆಯಿಂದ ಜಿಗಿದಿದ್ದ ವ್ಯಕ್ತಿಯ ಮೃತದೇಹ ಬೆಂಗ್ರೆ ಬಳಿ ಪತ್ತೆಯಾಗಿದ್ದು, ಪಣಂಬೂರು ಪೊಲೀಸರು ಮಹಜರು ನಡೆಸಿದ್ದರು.
ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ದೂರು ದಾಖಲಾಗಿತ್ತು.
ಮೃತನ ಮರಣೋತ್ತರ ಪರೀಕ್ಷೆ ಹಾಗೂ ಪ್ರಕರಣ ಮ್ಯಾಜಿಸ್ಟ್ರೇಟ್ ಸಮಕ್ಷಮ ನಡೆದಿತ್ತು.
ಸರಕಾರ ಈ ಪ್ರಕರಣದ ಲಾಕಪ್ ಡೆತ್ ಎಂದು ಪರಿಗಣಿಸಿ ಗಂಭೀರ ವಾಗಿ ತೆಗೆದುಕೊಂಡು ಸಿ.ಒ.ಡಿ.ತನಿಖೆಗೆ ಆದೇಶಿಸಿದೆ.

More from the blog

ಮೊಡಂಕಾಪು ಕಾರ್ಮೆಲ್ ಪ್ರೌಢಶಾಲೆ : ಕಾಗದ ಚೀಲ ತಯಾರಿಸಿದ ವಿದ್ಯಾರ್ಥಿಗಳು..

ಬಂಟ್ವಾಳ : ಬದಲಾವಣೆ ಎಂದರೆ ದೊಡ್ಡ ಕೆಲಸವಲ್ಲ. ಅದು ನಮ್ಮ ಮನೆಯಿಂದ, ನಮ್ಮ ಕೈಗಳಿಂದ ಆರಂಭವಾಗಬೇಕು.ಇಂದು ನಾವು ತೀರ್ಮಾನ ಮಾಡಿದರೆ –ಪ್ಲಾಸ್ಟಿಕ್ ಚೀಲಕ್ಕೆ “ಇಲ್ಲ” ಎಂದು ಹೇಳಿದರೆ, ಪೇಪರ್ ಅಥವಾ ಬಟ್ಟೆ ಚೀಲ...

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...