Tuesday, February 11, 2025

ಪೋಲೀಸ್ ಕಸ್ಟಡಿಯಲ್ಲಿ ಆರೋಪಿ ಡೆತ್: ಪ್ರಕರಣ ಸಿ.ಒ.ಡಿ.ತನಿಖೆಗೆ

ಬಂಟ್ವಾಳ: ಪೋಲೀಸ್ ವಶದಲ್ಲಿರುವಾಗಲೇ ಆರೋಪಿ ನದಿಗೆ ಹಾರಿ ಆತ್ಮಹತ್ಯೆ ಮಾಡಿದ ಪ್ರಕರಣ ಸಿ.ಒ.ಡಿ.ತನಿಖೆಗೆ.

ಪತ್ನಿ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ಕರೆತರುವಾಗ ಕೂಳೂರು ಸೇತುವೆ ಮೇಲಿಂದ ನದಿಗೆ ಆರೋಪಿ ಜಿಗಿದು ಮೃತಪಟ್ಟ ಪ್ರಕರಣ ಸಿ.ಒ.ಡಿ.ತನಿಖೆ ಮಾಡುವಂತೆ ಸರಕಾರ ಅದೇಶ ನೀಡಿದೆ.
ಸರಕಾರದ ಆದೇಶದ ಮೇಲೆ ಸಿ.ಒ.ಡಿ.ಪೋಲೀಸರು ಬಂದರು ಠಾಣೆಗೆ ಅಗಮಿಸಿ ದೂರುದಾರರು ಮತ್ತು ಪೋಲೀಸರ ತನಿಖೆ ಆರಂಬಿಸಿದ್ದಾರೆ.

ಘಟನೆಯ ವಿವರ : ಮಂಗಳೂರಿನ ಕುದ್ರೋಳಿ ನಿವಾಸಿ ಮುನೀರ್ (42) ಎಂಬಾತ ಪತ್ನಿ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದರು ಪೋಲೀಸರು ಪೊಲೀಸ್ ಠಾಣೆಗೆ ಕರೆತರುವಾಗ ಕೂಳೂರು ಸೇತುವೆ ಮೇಲಿಂದ ನದಿಗೆ ಆರೋಪಿ ಜಿಗಿದು ಮೃತಪಟ್ಟಿದ್ದ.

ಮುನೀರ್ ತನ್ನ ಪತ್ನಿ ಮೇಲೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಮಂಗಳೂರು ಉತ್ತರ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿಯು ಆಟೋ ರಿಕ್ಷಾವೊಂದರಲ್ಲಿ ಹಳೆಯಂಗಡಿ ಸಮೀಪ ಬರುತ್ತಿದ್ದ ವೇಳೆ ಅನುಮಾನಗೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಯನ್ನು ಅದೇ ಆಟೋದಲ್ಲಿ ಮಂಗಳೂರಿನ ಬಂದರು ಠಾಣೆಗೆ ಕರೆತರುವಾಗ ಕೂಳೂರು ಸೇತುವೆ ಬಳಿ ಮೂತ್ರ ಬಂದಿದೆ.
ಕೆಳಗಿಳಿಯಬೇಕು ಎಂದು ಹೇಳಿದ್ದಾನೆ. ಆಟೋದಿಂದ ಕೆಳಗಿಳಿದ ತಕ್ಷಣವೇ ಆರೋಪಿ ಸೇತುವೆ ಮೇಲಿಂದ ನದಿಗೆ ಹಾರಿದ್ದಾನೆ.
ಸೇತುವೆಯಿಂದ ಜಿಗಿದಿದ್ದ ವ್ಯಕ್ತಿಯ ಮೃತದೇಹ ಬೆಂಗ್ರೆ ಬಳಿ ಪತ್ತೆಯಾಗಿದ್ದು, ಪಣಂಬೂರು ಪೊಲೀಸರು ಮಹಜರು ನಡೆಸಿದ್ದರು.
ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ದೂರು ದಾಖಲಾಗಿತ್ತು.
ಮೃತನ ಮರಣೋತ್ತರ ಪರೀಕ್ಷೆ ಹಾಗೂ ಪ್ರಕರಣ ಮ್ಯಾಜಿಸ್ಟ್ರೇಟ್ ಸಮಕ್ಷಮ ನಡೆದಿತ್ತು.
ಸರಕಾರ ಈ ಪ್ರಕರಣದ ಲಾಕಪ್ ಡೆತ್ ಎಂದು ಪರಿಗಣಿಸಿ ಗಂಭೀರ ವಾಗಿ ತೆಗೆದುಕೊಂಡು ಸಿ.ಒ.ಡಿ.ತನಿಖೆಗೆ ಆದೇಶಿಸಿದೆ.

More from the blog

ಇದು ಸರಕಾರಿ ಜಾಗವೋ,ತಾ.ಪಂ.ನ ಜಾಗನಾ? ಇದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...

ಸಿಲಿಂಡರ್ ಸ್ಫೋಟ : ಓರ್ವನಿಗೆ ಗಾಯ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ನಡೆದಿದೆ. ಸುಭಾಷ್ ನಗರ ನಿವಾಸಿ...

ಬ್ಲಡ್ ಕ್ಯಾನ್ಸರ್ ಗೆ ಪೋಲಿಸ್ ಸಿಬ್ಬಂದಿ ಬಲಿ

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ. ಅವಿವಾಹಿತನಾಗಿದ್ದ ಅಭಿಷೇಕ್...