Tuesday, July 8, 2025

ಹಿರಿಯ ನಾಟಕ ರಚನೆಕಾರ, ಕಲಾವಿದ ಹೃದಯಾಘಾತದಿಂದ ನಿಧನ

ಬಂಟ್ವಾಳ: ಪ್ರಸಿದ್ದ ಹಿರಿಯ ಕಲಾವಿದ , ನಾಟಕ ರಚನೆಕಾರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ 9.30 ರ ಸುಮಾರಿಗೆ ಕಳ್ಳಿಗೆಯಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದರಿಬಾಗಿಲು ಬದ್ಯಾರು ನಿವಾಸಿ ಗಿರಿಯಪ್ಪ ಕುಲಾಲ್ ಬದ್ಯಾರು (58). ಹೃದಯಾಘಾತದಿಂದ ಸ್ವಗೃಹ ದಲ್ಲಿ ನಿಧನರಾದರು.

ಬಿಸಿರೋಡಿನ ಗಾಣದಪಡ್ಪು ಎಂಬಲ್ಲಿ “ಕಾಂತಿ ಆರ್ಟ್ಸ್ “ಎಂಬ ಹೆಸರಿನ ಸಂಸ್ಥೆಯ ಮೂಲಕ ಬ್ಯಾನರ್ , ಸಹಿತ ಅನೇಕ ರೀತಿಯ ಕಲೆಗೆ ಸಂಬಂಧಿಸಿದ ಕೆಲಸ ಕಾರ್ಯಗಳು ನಡೆಸುತ್ತಿದ್ದರು.
*__ನಾಟಕಕಾರ__* ಗಿರಿಯಪ್ಪ ಬದ್ಯಾರು ಅವರು ಹೆಸರು ನಾಟಕರಂಗದಲ್ಲಿ ಪ್ರಸಿದ್ಧಿ ಪಡೆದಿವೆ.


ಇವರು ಸುಮಾರು 60 ಕ್ಕೂ ಅಧಿಕ ತುಳು ಸಾಮಾಜಿಕ , ಹಾಸ್ಯ ಹಾಗೂ ಪೌರಾಣಿಕ ನಾಟಕಗಳನ್ನು ಇವರು ರಚಿಸಿದ್ದಾರೆ.
ಧರ್ಮಛತ್ರ ಪೌರಾಣಿಕ ನಾಟಕ ಹಲವು ಪ್ರಶಸ್ತಿ ಗಳನ್ನು ಪಡೆದ ನಾಟಕ ವಾಗಿದೆ.ಜೊತೆಗೆ ಸತ್ಯ ಓಲುಂಡು, ಕಾಳಿಂಗ, ಸತ್ಯ ಹರಿಶ್ಚಂದ್ರ ನಾಟಕಗಳು ಪ್ರಸಿದ್ದಿ ಪಡೆದ ನಾಟಕಗಳು.
ಯುವಕಲಾವಿದರಿಗೆ ಗಾಡ್ ಫಾದರ್
ಇವರ ಗರಡಿ ಯಲ್ಲಿ ಅನೇಕ ಕಲಾವಿದರು ಸೃಷ್ಟಿಯಾಗಿ, ವೇದಿಕೆ ಮೇಲೆ ಹೋದವರು. ಅನೇಕ ಯುವಕಲಾವಿದರಿಗೆ ಇವರು ಆಶ್ರಯ ದಾತರು ಆಗಿದ್ದರು. ಪ್ರತಿ ವರ್ಷ ಕಳ್ಳಿಗೆ ಗ್ರಾಮದಲ್ಲಿ ಉಚಿತವಾಗಿ ಹೊಸ ನಾಟಕಗಳನ್ನು ಪ್ರದರ್ಶನ ನೀಡುತ್ತಿದ್ದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...