Friday, January 30, 2026

ಮುರುಡೇಶ್ವರ: ಪ್ರವಾಸಕ್ಕೆ ತೆರಳಿದ್ದ ಇಬ್ಬರು ಯುವಕರು ಸಮುದ್ರ ಪಾಲು

ಮುರುಡೇಶ್ವರ: ನಿನ್ನೆ ಮುರುಡೇಶ್ವರಕ್ಕೆ ಪ್ರವಾಸಕ್ಕಾಗಿ ಆಗಮಿಸಿದ್ದ ಎರಡು ವಿಭಿನ್ನ ಗುಂಪಿಗೆ ಸೇರಿದ ಇಬ್ಬರು ಯುವಕರು ಒಂದೇ ದಿನ ಸಮುದ್ರ ಪಾಲಾಗಿದ್ದಾರೆ. ಅವರಲ್ಲಿ ಒಬ್ಬರು ಬೆಂಗಳೂರಿನವರಾಗಿದ್ದು, ಇನ್ನೊಬ್ಬರು ಶಿವಮೊಗ್ಗ ಜಿಲ್ಲೆಯ ಸೊರಬದವರೆಂಬ ಮಾಹಿತಿ ಇದೆ.
ಮೃತ ಯುವಕ ಅಭಿಜಿತ್ (24) ಅವರು ಬೆಂಗಳೂರಿನ ಯಲಹಂಕ ನ್ಯೂಟೌನ್ ನವರಾಗಿದ್ದು, ಎಲೆಕ್ಟ್ರಾನಿಕ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಮತ್ತೊರ್ವ ಮೃತ ಯುವಕ ಶರತ್ ಜಗದೀಶ್ ಬಳ್ಳಾರಿ (18) ಶಿವಮೊಗ್ಗ ಜಿಲ್ಲೆಯ ಸೊರಬದ ಹಳೆಬ್ಸೊರಬದ ಜಯಂತಿವಾಡ ಮೂಲದವನು. ಎರಡೂ ಶವಗಳನ್ನು ಸಮುದ್ರದಿಂದ ಎತ್ತಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಪ್ರಕರಣ ದಾಖಲಾಗಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...