Friday, June 27, 2025

ಮರದಿಂದ ಬಿದ್ದು ಗಾಯಗೊಂಡಿದ್ದ ಕೃಷಿಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ

ಬಂಟ್ವಾಳ: ಮರದ ಗೆಲ್ಲು ಕಡಿಯುವ ವೇಳೆ ಆಕಸ್ಮಿಕವಾಗಿ ಮರದಿಂದ ಕೆಲಕ್ಕೆ ಬಿದ್ದು ಗಾಯಗೊಂಡಿದ್ದ ಕೃಷಿಕನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಣಿನಾಲ್ಕೂರು ಎಂಬಲ್ಲಿ ನಡೆದಿದೆ.

ಮಣಿನಾಲ್ಕೂರು ಗ್ರಾಮದ ಮಿನಾಲ್ದೊಟ್ಟು ನಿವಾಸಿ ಅಶೋಕ್ (35) ಅವರು ಮೃತಪಟ್ಟ ವ್ಯಕ್ತಿ.

ಇವರು ಫೆ.7 ರಂದು ಬೆಳಿಗ್ಗೆ ಮನೆಯ ಸಮೀಪದ ಗುಡ್ಡೆಯಲ್ಲಿರುವ ಮರದ ಗೆಲ್ಲು ಕಡಿಯುವ ಉದ್ದೇಶದಿಂದ ಮರಕ್ಕೆ ಹತ್ತಿದ್ದರು.

ಆದರೆ ಗೆಲ್ಲು ಕಡಿಯುವ ವೇಳೆ ಆಕಸ್ಮಿಕವಾಗಿ ಆಯತಪ್ಪಿ ಕೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಅವರನ್ನು ಕೂಡಲೇ ತುಂಬೆ ಹಾಗೂ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಶೋಕ್ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಇಂದು (ಮಾ.3)ಮಧ್ಯಾಹ್ನ ಮೃತಪಟ್ಟಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಲ್ಲಿ ಪ್ರಕರಣ ದಾಖಲಾಗಿದೆ.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...