Sunday, January 25, 2026

ನಿವೃತ್ತ ಗ್ರಾಮ ಸಹಾಯಕ ಬಾಬು ಶೆಟ್ಟಿಗಾರ್ ನಿಧನ.

ಬಂಟ್ವಾಳ: ಬಂಟ್ವಾಳ ತಾಲೂಕು ಸಂಗಬೆಟ್ಟು ಮತ್ತು ಕರ್ಪೆ ಗ್ರಾಮದ (ಸಂಗಬೆಟ್ಟು) ನಿವೃತ್ತ ಗ್ರಾಮ ಸಹಾಯಕ ಬಾಬು ಶೆಟ್ಟಿಗಾರ್ (ಬಾಬಾಣ್ಣ) (80) ಜನವರಿ 2 ರಂದು ಬೆಳೆಗ್ಗೆ ಹೃದಯಘಾತದಿಂದ ಸ್ವಗೃಹ ಸಿದ್ದಕಟ್ಟೆಯಲ್ಲಿ ನಿಧನ ಹೊಂದಿದರು. ಶ್ರೀಯುತರು ಹಲವಾರು ವರ್ಷಗಳ ಕಾಲ ಸಂಗಬೆಟ್ಟು ಮತ್ತು ಕರ್ಪೆ ಗ್ರಾಮದಲ್ಲಿ ಗ್ರಾಮ ಸಹಾಯಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ಎಲ್ಲರಿಂದಲೂ ಉಗ್ರಾಣಿ ಬಾಬಣ್ಣ ಎಂದು ಪ್ರಸಿದ್ಧಿಗೊಂಡು ಜನಾನುರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು,ಮೂವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಜನಸ್ತೋಮವನ್ನು ಅಗಲಿದ್ದಾರೆ. ಸ್ಥಳೀಯ ತಾ. ಪಂ. ಸದಸ್ಯ ಪ್ರಭಾಕರ ಪ್ರಭು, ಗ್ರಾ. ಪಂ. ಅದ್ಯಕ್ಸೆ ಗುಲಾಬಿ ಶೆಟ್ಟಿ, ಮಾಜಿ ಎ.ಪಿ.ಎಮ್.ಸಿ. ಸದಸ್ಯ ರತ್ನಕುಮಾರ್‍ ಚೌಟ ಅಂತಿಮ ದರ್ಶನ ಪಡೆದರು.
ಬಂಟ್ವಾಳ ಶಾಸಕ ರಾಜೆಶ್ ನಾಯ್ಕ್ ಉಳಿಪಾಡಿ, ಬಂಟ್ವಾಳ ತಾಲೂಕು ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ಮೋಹನ ಕೊಟ್ಟಾರಿ, ಕರ್ನಾಟಕ ರಾಜ್ಯದ ಗ್ರಾಮ ಸಹಾಯಕರ ಸಂಘದ ಗೌರವ ಅದ್ಯಕ್ಷ ಜನಾರ್ದನ ಬಂಟ್ವಾಳ ಸಂತಾಪ ಸೂಚಿಸಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...