Monday, July 7, 2025

ಪೊಲೀಸ್ ಇಲಾಖೆಯಲ್ಲಿ ದೀಪಾವಳಿ ಆಚರಣೆ ದಾಖಲೆ ಕಾರ್ಯಕ್ರಮ: ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ

ಬಂಟ್ವಾಳ: ಕಲಾವಿದರ ಮತ್ತು ಸಾಧಕರ ಜೊತೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ದೀಪಾವಳಿ ಆಚರಣೆ ಮಾಡಿರುವುದು ಯಶಸ್ವಿ ಮತ್ತು ದಾಖಲೆಯ ಕಾರ್ಯಕ್ರಮವಾಗಿದೆ ಎಂದು ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ ಹೇಳಿದರು.
ಅವರು ಬಿಸಿರೋಡು ಕೈಕಂಬದಲ್ಲಿರುವ ಸೂರ್ಯವಂಶ ಫೌಂಡೇಶನ್ ವತಿಯಿಂದ ಅಧ್ಯಕ್ಷ ಪ್ರೋ.ಡಾ. ಕೆ. ಗೋವರ್ಧನ ರಾವ್ ಅವರ ನೇತೃತ್ವದಲ್ಲಿ ಬಿಸಿರೋಡಿನ ನಗರ ಪೊಲೀಸ್ ಸ್ಟೇಷನ್ ನಲ್ಲಿ ನಡೆದ ವಿಶೇಷ ದೀಪಾವಳಿ ಆಚರಣೆಯ ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ಇಂತಹ ಕಾರ್ಯಕ್ರಮ ಪೊಲೀಸ್ ಇಲಾಖೆಯಲ್ಲಿ ಪ್ರಥಮ. ನಿಜಕ್ಕೂ ಮನಸ್ಸಿಗೆ ತುಂಬಾ ಖುಷಿ ನೀಡಿದೆ. ಪೊಲೀಸರೊಂದಿಗೆ ದೀಪಾವಳಿ ಆಚರಣೆ ಉತ್ತಮ ಹಾಗೂ ಇತರರಿಗೆ ಪ್ರೇರಣೆ ನೀಡುವ ಕಾರ್ಯಕ್ರಮವಾಗಿದೆ ಎಂದು ಹೇಳಿದರು.
ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್ ಮಾತನಾಡಿ, ದಿನದ ಇಪ್ಪತ್ತುನಾಲ್ಕು ಗಂಟೆಯೂ ಕೆಲಸದ ಒತ್ತಡದ ಮಧ್ಯೆ ಇರುವ ಪೊಲೀಸರನ್ನು ಗುರುತಿಸಿ ದೀಪಾವಳಿ ಜೊತೆ ಗೌರವಿಸುವ ಮಾದರಿಯಾಗಿದೆ ಎಂದರು.
ಮುಖ್ಯ ಅತಿಥಿ ದೀಪಿಕಾ ಪ್ರೌಢ ಶಾಲಾ ನಿವೃತ್ತ ಶಿಕ್ಷಕ ಸೀತಾರಾಮ ಭಟ್ ಮಾತನಾಡಿ, ಸಮಾಜಿಮುಖಿ ಕಾರ್ಯಗಳ ಜೊತೆ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಕೆಲಸ ಶ್ಲಾಘನೀಯ. ವಿದೇಶದಲ್ಲಿ ದುಡಿದು ಅನೇಕ ಡಾಕ್ಟರೇಟ್ ಪದವಿಗಳನ್ನು ಪಡೆದ ಗೋವರ್ಧನ ಅವರು ವಿದೇಶಿ ಸಂಸ್ಕ್ರತಿಗೆ ಮಾರು ಹೋಗದೆ ಭಾರತೀಯ ಸಂಸ್ಕೃತಿಯನ್ನು ಬೆಳೆಸಲು ಚಿಂತನೆ ನಡೆಸಿರುವುದು ಉತ್ತಮ ಬೆಳವಣಿಗೆ ಎಂದರು.
ಅಮೃತಾ ಪ್ರಕಾಶನ ಮಾಸಿಕ ಪತ್ರಿಕೆಯ ಸಂಪಾದಕಿ ಮಾಲತಿ ಶೆಟ್ಟಿ ಮಾಣೂರು ಮಾತನಾಡಿ, ವಿನೂತನ ಹಾಗೂ ಸಮಾಜಿ ಮುಖಿ ಕಾರ್ಯಕ್ರಮ, ಅಜ್ಞಾನ ಹೋಗಲಾಡಿಸಿ ಜ್ಞಾನದ ದೀವಿಗೆಯನ್ನು ಉದಯಿಸಲಿ ಎಂದು ಹೇಳಿದರು.
ವೇದಿಕೆಯಲ್ಲಿ ಬಂಟ್ವಾಳ ಗ್ರಾಮಾಂತರ ಎಸ್.ಐ. ಪ್ರಸನ್ನ, ನಗರ ಠಾಣಾ ಅಪರಾಧ ವಿಭಾಗದ ಎಸ್.ಐ.ಕಲೈಮಾರ್, ನಿವೃತ್ತ ಬ್ಯಾಂಕ್ ಮ್ಯಾನೇಜರ್ ಡಾ. ಅಶೋಕ್ ಕುಮಾರ್, ಕನ್ನಡ ನಟಿ ಅಕ್ಷತಾ, ಉಮಾ ಗೋವರ್ಧನ ರಾವ್, ಪಜ್ವಲ್ ಗೋವರ್ಧನ ರಾವ್, ಪ್ರತೀಕ್ಷಾ ಗೋವರ್ಧನ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ, ಎಸ್.ಐ.ಅವಿನಾಶ್, ಪ್ರಸನ್ನ, ಕಲೈಮಾರ್ ಹಾಗೂ ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಸಿಬ್ಬಂದಿ ವಿವೇಕ್ ಸ್ವಾಗತಿಸಿ, ವಂದಿಸಿದರು.

More from the blog

ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳ ‘ಹೃದಯ ತಪಾಸಣೆ’ಗೆ ಕ್ರಮ : ಸಚಿವ ಕೆ.ಎನ್‌. ರಾಜಣ್ಣ..

ರಾಜ್ಯದಲ್ಲಿ ಹೃದಯಾಘಾತದಿಂದ ಪ್ರಾಣ ಕಳೆದುಕೊಳ್ಳುತ್ತಿರುವ ಸರಣಿ ಪ್ರಕರಣಗಳು ಮುಂದುವರಿದಿವೆ. ಈ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಕೆ ಎನ್ ರಾಜಣ್ಣ ತಿಳಿಸಿದ್ದಾರೆ. ಹೃದಯಾಘಾತ ಪ್ರಕರಣಗಳನ್ನು...

ನವಭಾರತ್ ಯುವಕ ಸಂಘ ರಿ. ಅನಂತಾಡಿ ಇದರ ನೂತನ ಅಧ್ಯಕ್ಷರಾಗಿ ಯೋಗೀಶ್ ಪೂಂಜಾವು ಆಯ್ಕೆ

ವಿಟ್ಲ : ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನವಭಾರತ್ ಯುವಕ ಸಂಘ ರಿ) ಅನಂತಾಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಗೌರವಧ್ಯಕ್ಷರಾದ ಜಗನ್ನಾಥ ಅಶ್ವತಾಡಿ ಮತ್ತು ಹರಿನಾಕ್ಷ ಪಡಿಪಿರೆ ಇವರ ಉಪಸ್ಥಿಯಲ್ಲಿ ಸಂಘದ...

ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಕ್ರಮ..

ಬಂಟ್ವಾಳ : ವ್ಯಸನಗಳು ವ್ಯಕ್ತಿಯ ಆರೋಗ್ಯ ಕುಟುಂಬ ಮತ್ತು ಸಮಾಜದ ಮೇಲೆ ಪ್ರಭಾವವನ್ನು ಬೀರುತ್ತವೆ, ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳು ಮಾಡಿ ಆರ್ಥಿಕ ನಷ್ಟವನ್ನು ಉಂಟು ಮಾಡುವುದಲ್ಲದೆ ಕುಟುಂಬದಲ್ಲಿ ಕಲಹ ಮಾನಸಿಕ...

ಏಮಾಜೆ ಶಾಲೆ : ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ..

ಬಂಟ್ವಾಳ : ಶಾಲಾ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮಹತ್ವದ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ. ಸರಕಾರಿ ಕಿ. ಪ್ರಾ ಶಾಲೆ ಏಮಾಜೆಯಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ...