ಮುಂಬಯಿ, ಆ.೨೩: ಎಂಆರ್ಜಿ ಸಮೂಹ ಬೆಂಗಳೂರು ಸಂಸ್ಥೆಯ ಕಾರ್ಯಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ (ಬಂಜಾರ) ಅವರು ಕರ್ನಾಟಕ ರಾಜ್ಯದಾದ್ಯಂತ ಸೃಷ್ಟಿಯಾದ ನೆರೆ ಪ್ರವಾಹದಿಂದ ಸಂಕಷ್ಟಕ್ಕೊಳಗಾದ ಜನತೆಗೆ ಸಹಾಯಾರ್ಥವಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ (ರಿಲೀಫ್ ಫಂಡ್ಗೆ) ಒಂದು ಕೋಟಿ ರೂಪಾಯಿ ಮೊತ್ತವನ್ನು ನೀಡಿದರು.
ಈ ಚೆಕ್ನ್ನು ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕಳೆದ ಗುರುವಾರ ಬೆಂಗಳೂರು ಬೆಂಗಳೂರುನಲ್ಲಿ ಹಸ್ತಾಂತರಿದರು. ಈ ಸಂದರ್ಭದಲ್ಲಿ ಎಂಆರ್ಜಿ ಸಮೂಹದ ಆಡಳಿತ ನಿರ್ದೇಶಕ ಗೌರವ್ ಪಿ.ಶೆಟ್ಟಿ ಉಪಸ್ಥಿತರಿದ್ದರು.

