Wednesday, July 9, 2025

’ಮಗಳಿಗೊಂದು ಪತ್ರ ಭಾಗ -2’ ಹಾಗೂ ಬಾಹುಬಲಿಯ ಕುರಿತ ’ಮಹಾಯಾನ’ ಕೃತಿಗಳ ಬಿಡುಗಡೆ

ಧರ್ಮಸ್ಥಳ: ಹೇಮಾವತಿ ಹೆಗ್ಗಡೆಯವರು ’ಮಂಜುವಾಣಿ’ ಮಾಸಪತ್ರಿಕೆಗಾಗಿ ಬರೆಯುವ ಅಂಕಣ ಬರಹಗಳ ಸಂಗ್ರಹ ’ಮಗಳಿಗೊಂದು ಪತ್ರ – ಭಾಗ 2’ ಮತ್ತು ಧರ್ಮಸ್ಥಳದ ಭಗವಾನ್ ಬಾಹುಬಲಿಯ ಕುರಿತಾದ ಕಥೆ-ಚಿತ್ರಗಳ ಸಂಗ್ರಹವಿರುವ ’ಮಹಾಯಾನ – ಇದು ಕಲ್ಲು ಹೇಳಿದ ಕಥೆ’ ಎಂಬ ಎರಡು ಕೃತಿಗಳು ಧರ್ಮಸ್ಥಳದಲ್ಲಿ ಫೆಬ್ರುವರಿ 15 ರಂದು ಬಿಡುಗಡೆಗೊಂಡವು.
ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಆಯೋಜಿತವಾಗಿದ್ದ ಸಮವಸರಣ ಪೂಜೆಯ ವೇಳೆ ಪರಮಪೂಜ್ಯ ಆಚಾರ್ಯ ಶ್ರೀ 108 ವರ್ಧಮಾನ ಸಾಗರ್‌ಜೀ ಮುನಿಮಹಾರಾಜ್ ಅವರು ’ಮಹಾಯಾನ’ ಹಾಗೂ ಆಚಾರ್ಯ ಶ್ರೀ ವಾತ್ಸಲ್ಯವಾರಿಧಿ 108 ಪುಷ್ಪದಂತ ಸಾಗರ ಮುನಿಮಹಾರಾಜ್ ಅವರು ’ಮಗಳಿಗೊಂದು ಪತ್ರ ಭಾಗ-2’ ಕೃತಿಗಳನ್ನು ಲೋಕಾರ್ಪಣೆ ಮಾಡಿದರು.


’ಮಗಳಿಗೊಂದು ಪತ್ರ ಭಾಗ – 2’ ಕೃತಿಯನ್ನು ಡಾ. ಬಿ. ಯಶೋವರ್ಮ ಅವರು ಸಂಪಾದಿಸಿದ್ದು, ಇದರಲ್ಲಿ ಹೇಮಾವತಿ ಹೆಗ್ಗಡೆಯವರು ಬರೆದಿರುವ ಸಾಮಾಜಿಕ, ಸಾಂಸ್ಕೃತಿಕ, ಸಾಹಿತ್ಯಿಕ, ಧಾರ್ಮಿಕ ಹೀಗೆ ಅನೇಕ ಸಕಾಲಿಕ ವಿಷಯಗಳ ಕುರಿತಾದ ಅಂಕಗಳ ಸಂಗ್ರಹವಿದೆ. ಒಟ್ಟು ೪೨ ಬರಹಗಳ ಈ ಮಾಲಿಕೆಯಲ್ಲಿ ಮೌಲಿಕ ವಿಷಯಗಳನ್ನು ಸರಳ ಭಾಷೆಯಲ್ಲಿ ಎಲ್ಲಾ ವರ್ಗದವರಿಗೂ ಅರ್ಥವಾಗುವ ರೀತಿಯಲ್ಲಿ ನಿರೂಪಣೆ ಮಾಡಲಾಗಿದೆ.
’ಮಹಾಯಾನ – ಇದು ಕಲ್ಲು ಹೇಳಿದ ಕಥೆ’ ಎಂಬ ಪುಸ್ತಕದಲ್ಲಿ ಧರ್ಮಸ್ಥಳದ ಬಾಹುಬಲಿ ಕಾರ್ಕಳದಿಂದ ಧರ್ಮಸ್ಥಳಕ್ಕೆ ಬಂದ ಬಗೆಯನ್ನು ಸಣ್ಣ-ಸಣ್ಣ ಕಥೆಯ ರೂಪದಲ್ಲಿ ನಿರೂಪಿಸಲಾಗಿದೆ. ಶ್ರೀಮತಿ ಸೋನಿಯಾ ಯಶೋವರ್ಮ ಅವರ ಪರಿಕಲ್ಪನೆಯಲ್ಲಿ, ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾದ ಸುನಿಲ್ ಹೆಗ್ಡೆ ಹಾಗು ಮಾಧವ ಹೊಳ್ಳ ಅವರ ನಿರೂಪಣೆಯಲ್ಲಿ ’ಮಹಾಯಾನ’ ಪ್ರಕಟವಾಗಿದೆ. ಪುಸ್ತಕದಲ್ಲಿ ಕಥೆ ಹಾಗೂ ಅದಕ್ಕೊಪ್ಪುವ ಅಪರೂಪದ ಛಾಯಾಚಿತ್ರಗಳನ್ನು ನೀಡಲಾಗಿದೆ.
ಡಿ. ವೀರೇಂದ್ರ ಹೆಗ್ಗಡೆಯವರು ಬಾಹುಬಲಿಯನ್ನು ಕಾರ್ಕಳದಿಂದ ಸಾಗಿಸಿದ ಸಾಧನೆಯ ಕುರಿತ ೫೦ ಐತಿಹಾಸಿಕ ಘಟನೆಗಳನ್ನು ’ಮಹಾಯಾನ’ ಪುಸ್ತಕ ಐತಿಹಾಸಿಕ ಘಟನೆಗಳನ್ನು ಕಥೆಯ ರೂಪದಲ್ಲಿ ಕಟ್ಟಿಕೊಡುವುದರಿಂದ ಇಂದಿನ ಹಾಗೂ ಮುಂದಿನ ತಲೆಮಾರಿನ ಎಲ್ಲರಿಗೂ ಧರ್ಮಸ್ಥಳ ಬಾಹುಬಲಿಯ ಕಥೆ ತಲುಪುತ್ತದೆ ಎಂದು ’ಮಹಾಯಾನ’ಕ್ಕೆ ಬರೆದ ಮುನ್ನುಡಿಯಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉಲ್ಲೇಖಿಸಿದ್ದಾರೆ.
ಕಾರ್ಯಕ್ರಮದಲ್ಲಿ ಹೆಗ್ಗಡೆ ಕುಟುಂಬಸ್ಥರು, ಮುನಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ: ಧೃತಿ ಅಂಚನ್, ಪ್ರಥಮ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ, ಎಸ್.ಡಿ.ಎಂ ಕಾಲೇಜು, ಉಜಿರೆ
ಚಿತ್ರ: ಧನ್ಯಾ ಹೊಳ್ಳ, ದ್ವಿತೀಯ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ, ಎಸ್.ಡಿ.ಎಂ ಕಾಲೇಜು, ಉಜಿರೆ

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...