Tuesday, February 11, 2025

ದಕ್ಷಿಣಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನ: ಧರ್ಮಸ್ಥಳದಲ್ಲಿ ಲಾಂಛನ ಬಿಡುಗಡೆ

ಉಜಿರೆ: ದಕ್ಷಿಣಕನ್ನಡಜಿಲ್ಲೆಯ ಪತ್ರಕರ್ತರು ವಿಶೇಷವಾಗಿ, ವಿಭಿನ್ನವಾಗಿ ಹೊಣೆಗಾರಿಕೆಯಿಂದಕಾರ್ಯ ನಿರ್ವಹಿಸಿ ತಮ್ಮ ವೃತ್ತಿಯಘನತೆ, ಗೌರವಕಾಪಾಡಿಕೊಂಡಿದ್ದಾರೆಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.
ದ.ಕ. ಜಿಲ್ಲಾಕಾರ್ಯ ನಿರತ ಪತ್ರಕರ್ತರ ಸಂಘದಆಶ್ರಯದಲ್ಲಿ ಜುಲೈ ಒಂದರಂದು ಮಂಗಳೂರಿನಲ್ಲಿ ನಡೆಯಲಿರುವ ಜಿಲ್ಲಾ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಅವರು ಸೋಮವಾರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಪ್ರಜ್ಞಾವಂತರಾಗಿ, ವಿಚಾರವಂತರಾಗಿ, ಬುದ್ಧಿವಂತರಾಗಿತಮ್ಮ ಸೃಜನಶೀಲ ವರದಿಗಾರಿಕೆಯಿಂದ ಓದುಗರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ತಾನು ಮೂರುತಲೆ ಮಾರಿನ ಪತ್ರಕರ್ತರ ಕಾರ್ಯ ಶೈಲಿಯನ್ನು ಗಮನಿಸಿದ್ದು ಹೊಸ ತಲೆ ಮಾರಿನ ಪತ್ರಕರ್ತರು ಕೂಡಾ ಪ್ರಾಮಾಣಿಕವಾಗಿ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿ ಜಿಲ್ಲಾ ಸಮ್ಮೇಳನಕ್ಕೆ ಶುಭ ಹಾರೈಸಿದರು.
ದಕ್ಷಿಣಕನ್ನಡಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಶ್ರೀನಿವಾಸ್ ನಾಯಕ್‌ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಸ್ವಾಗತ ಸಮಿತಿ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ, ನಗರ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಯನ್. ಪೂವಣಿ ಮತ್ತು ಧನಕೀರ್ತಿ ಆರಿಗ, ಧರ್ಮಸ್ಥಳ ಉಪಸ್ಥಿತರಿದ್ದರು.

More from the blog

ಮನೆಗೆ ಬೆಂಕಿ

ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹರಸಾಹಸ ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...