Monday, January 26, 2026

ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯ   ವಿದ್ಯಾರ್ಥಿಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಕ್ಷೇತ್ರದಿಂದ ನಡೆಸುತ್ತಿರುವ ಕಾರ್ಯಕ್ರಮಗಳ ಕುರಿತು ಅಧ್ಯಯನ ನಡಸಿದರು. ಈ ಸಂಧರ್ಭದಲ್ಲಿ ವಿಧ್ಯಾರ್ಥಿಗಳ ಜೊತೆ ಮಾತನಾಡುತ್ತಾ, ಸಮಾಜದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಬಹಳ ಅವಕಾಶಗಳಿವೆ. ಧಾರ್ಮಿಕ ಸಂಸ್ಥೆಗಳು ಧರ್ಮ ಸಂರಕ್ಷಣೆಯ ಜೊತೆಗೆ ಪ್ರಸಕ್ತ ಸಮಾಜದಲ್ಲಿ ಇರುವ ಸವಾಲುಗಳನ್ನು ಗುರುತಿಸಿ ಸ್ಪಂದಿಸಿದರೆ ಉತ್ತಮವಾಗುವುದು. ಶ್ರೀ ಕ್ಷೇತ್ರ ಧರ್ಮಸ್ಥಳ ಬಹಳ ವರ್ಷಗಳಿಂದ ಈ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ. ಪರಂಪರಾಗತವಾಗಿ ಬಂದಿರುವ ಈ ಕೈಂಕರ್ಯ ಸಮಾಜ ಸೇವೆಯನ್ನು ಮಾಡುವ ವಿಫುಲ ಅವಕಾಶವನ್ನು ನಮಗೆ ಒದಗಿಸಿದೆ. ಯೋಜನೆಗಳನ್ನು ಅನುಷ್ಠಾನಿಸುತ್ತಾ ಬಂದಂತೆ ಹೊಸ ಹೊಸ ಚಿಂತನೆಗಳನ್ನು ಕಾರ್ಯ ರೂಪಕ್ಕೆ ತರಲು ಸಾಧ್ಯವಾಯಿತು. ಅಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ಮಾಡುವುದು ಬಹಳ ಸಂತೋಷದಾಯಕ ಹಾಗೂ ಸವಾಲುಗಳು ಸಾಮಾನ್ಯ. ಎಂದಿಗೂ ಸವಾಲುಗಳನ್ನು ಎದುರಿಸಿ ಮುನ್ನಡೆದರೆ ಯಶಸ್ಸು ಸಾಧ್ಯ ಎಂದು ಡಾ. ಡಿ. ವಿರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು.

ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯನ್ನು“ನಾಲೆಡ್ಜ್ ಪಾರ್ಟ್‍ನರ್” ಆಗಿ ಗುರುತಿಸಿದ ಕುರಿತು ಪ್ರಮಾಣ ಪತ್ರವನ್ನು ಹಾಗೂ ಫಲಕವನ್ನು ನೀಡಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರನ್ನು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಪರವಾಗಿ ಪ್ರೊ. ಫೆಮಿಡಾ ಅವರು ಗೌರವಿಸಿದರು.

ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಹೆಚ್.ಮಂಜುನಾಥ್‍ ಅವರು ಗ್ರಾಮೀಣಾಭಿವೃದ್ಧಿ ಯೋಜನೆಯ ಕುರಿತು ವಿವರಿಸಿದರು. ಸಿರಿಗ್ರಾಮೊದ್ಯೋಗ ಸಂಸ್ಥೆಗೆ ಭೇಟಿ ನೀಡಲಾಯಿತು. ಕ್ಷೇತ್ರದ ವಿವಿಧ ವಿಭಾಗಗಳನ್ನು ಭೇಟಿ ಮಾಡಲಾಯಿತು. ತಂಡದಲ್ಲಿ ಪ್ರೊ.ಫೆಮಿಡಾ, ವಿನೋದ್ ದೀಕ್ಷೀತ್‍ ಅವರು ತಂಡವನ್ನು ಪ್ರತಿನಿಧಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕಿ ಮಮತಾ ಹರೀಶ್‍ ರಾವ್, ಉಪನ್ಯಾಸಕಿ ಚೈತನ್ಯಾ ಉಪಸ್ಥಿತರಿದ್ದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...