Sunday, June 29, 2025

ಧರ್ಮಸ್ಥಳ: ಭಗವಾನ್ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಪಾದಾಭಿಷೇಕ

ಉಜಿರೆ: ಧರ್ಮಸ್ಥಳ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಸ್ವಾಮಿಗೆ ಮಂಗಳವಾರ ಬೆಳಿಗ್ಗೆ  ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಿತು.
ಮಂಗಲ ಪ್ರವಚನ ನೀಡಿದ ಕಾರ್ಕಳದ ಲಲಿತಕೀರ್ತಿ ಭಟ್ಟಾರಕ ಸಾಮೀಜಿ ಮಾತನಾಡಿ, ಎಲ್ಲೆಲ್ಲೂ ಅನ್ಯಾಯ, ಕ್ರೋಧ, ದ್ವೇಷ, ವಂಚನೆ ತಾಂಡವವಾಡುತ್ತಿರುವ ಇಂದು ಬಾಹುಬಲಿಯ ತ್ಯಾಗ ಸಂದೇಶ ವಿಶ್ವಮಾನ್ಯವಾಗಿದೆ ಎಂದು ಹೇಳಿದರು.
ಭಾರತ ದೇಶವು ಧರ್ಮ, ಸಂಸ್ಕøತಿಯ ನೆಲೆವೀಡಾಗಿದ್ದು ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪನೆಗೊಂಡ ಭಗವಾನ್ ಬಾಹುಬಲಿ ಮೂರ್ತಿಯ ಆರಾಧನೆಯಿಂದ ತ್ಯಾಗ, ಅಹಿಂಸೆ, ಸಂಯಮ, ಇಂದ್ರಿಯ ನಿಗ್ರಹ ಮೊದಲಾದ ಮಾನವೀಯ ಗುಣಗಳು ಉದ್ದೀಪನಗೊಂಡು, ಪರಸ್ಪರ ಪ್ರೀತಿ-ವಿಶ್ವಾಸದಿಂದ ಶಾಂತಿ, ಸಾಮರಸ್ಯ ಮೂಡಿ ಬರುತ್ತದೆ. ಆರಾಧನೆ ಮೂಲಕ ನಾವು ಭಗವಂತನಲ್ಲಿರುವ ಅಮೂಲ್ಯ ಹಾಗೂ ಅನಂತ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆದುದರಿಂದಲೇ ನಾವು “ವಂದೇ ತದ್ಗುಣ ಲಬ್ದಯೇ” ಅಂದರೆ ದೇವರಲ್ಲಿರುವ ಅನಂತ ಗುಣಗಳು ನಮ್ಮಲ್ಲಿಯೂ ಮೂಡಿ ಬರಲಿ ಎಂದು ಪ್ರಾರ್ಥಿಸುತ್ತೇವೆ. ಬಾಹುಬಲಿ ತನ್ನ ಜೀವನದಲ್ಲಿ ಸಾಧಿಸಿ ತೋರಿಸಿದ ಅಹಿಂಸೆ, ತ್ಯಾಗ, ವೈರಾಗ್ಯದ ಮೂಲಕ ವಿಶ್ವಶಾಂತಿ ಉಂಟಾಗಲಿ ಎಂದು ಸ್ವಾಮೀಜಿ ಹಾರೈಸಿದರು.
ಕ್ಷುಲ್ಲಕ ಧ್ಯಾನ ಸಾಗರ್ ಮಹಾರಾಜ್ ಆಶೀರ್ವಚನ ನೀಡಿದರು.


ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಾ.ಬಿ. ಯಶೋವರ್ಮ, ಸೋನಿಯಾವರ್ಮ ಹಾಗೂ ಕುಟುಂಬಸ್ಥರು ಪಾದಾಭಿಷೇಕ ಮಾಡಿದರು.
ಪಂಚನಮಸ್ಕಾರ ಮಂತ್ರ ಪಠಣ, ಜಿನ ಭಜನೆ ಹಾಗೂ ಭಕ್ತಿಗೀತೆಗಳ ಗಾಯನ ನಡೆಯಿತು.
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಉಪಸ್ಥಿತರಿದ್ದರು.

 

More from the blog

Strike : ಜು. 9ರ ಕಾರ್ಮಿಕರ ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೇಡ್ ಪಿ.ಪಿ ಅಪ್ಪಣ್ಣ ಕರೆ

ಬಂಟ್ವಾಳ : ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ...

ನಿರ್ಧಿಷ್ಟ ಗುರಿಯೊಂದಿಗೆ ಯುವವಾಹಿನಿಯ ಸಂಘಟಿತ ಪಯಣ : ಭುವನೇಶ್ ಪಚ್ಚಿನಡ್ಕ..

ಬಂಟ್ವಾಳ : ನಿರ್ದಿಷ್ಟ ಗುರಿಯೊಂದಿಗೆ ಸಾಧನಾ ಪಥದಲ್ಲಿ ಯುವವಾಹಿನಿ ಸಂಘಟಿತವಾಗಿ ಪಯಣಿಸುತ್ತಿದೆ ಎಂದು ಯುವವಾಹಿನಿ ಬಂಟ್ವಾಳ ಘಟಕದ ರಜತವರ್ಷದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು. ಅವರು ರವಿವಾರ ಬಿ ಸಿ ರೋಡ್ ಯುವವಾಹಿನಿ ಭವನದಲ್ಲಿ...

ಮಕ್ಕಳಲ್ಲಿ ಹೃದಯಾಘಾತಕ್ಕೆ ಮೊಬೈಲ್‌ ಬಳಕೆ ಕಾರಣ – ಆಘಾತಕಾರಿ ವರದಿ ಬೆಳಕಿಗೆ..

ಇತ್ತೀಚೆಗೆ ವಯಸ್ಕರು ಮಾತ್ರವಲ್ಲದೆ ಯುವ ಜನತೆ, ಮಕ್ಕಳಲ್ಲಿ ಕೂಡಾ ಹೃದಯಾಘಾತ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೀಗ...

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...