Tuesday, July 15, 2025

ಇಂದಿನಿಂದ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಮುಕ್ತ ಅವಕಾಶ

ಧರ್ಮಸ್ಥಳ: ಸರಕಾರದ ಮಾರ್ಗಸೂಚಿಯಂತೆ ಹಾಗೂ ಕೊರೊನಾ ವೈರಸ್ ನಿಯಂತ್ರಿಸಲು ಮುಂಜಾಗರೂಕತೆಯನ್ನು ಅನುಸರಿಸಿ ಇಂದಿನಿಂದ ನಾಡಿನ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ದರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.

ದೇವರ ದರ್ಶನ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. ದೇವಸ್ಥಾನ ಅರ್ಚಕರು, ರಕ್ಷಣಾ ಸಿಬ್ಬಂದಿಗಳು ಹಾಗೂ ನೌಕರರು ನೀಡುವ ಸಲಹೆ ಸೂಚನೆಗಳನ್ನು ಗಮನಿಸಿ ಭಕ್ತರು ಸಹಕರಿಸಬೇಕು ಎಂದು ಕೋರಲಾಗಿದೆ.

ಡಾ ಹೆಗ್ಗಡೆಯವರ ಭೇಟಿ ಸಮಯ:

ಭಕ್ತರು ದರ್ಮಾಧಿಕಾರಿಗಳನ್ನು ಬೆಳಿಗ್ಗೆ ಗಂಟೆ 9.30 ರಿಂದ ಮಧ್ಯಾಹ್ನ 12.30 ರ ವರೆಗೆ ಹಾಗೂ ಸಂಜೆ ಗಂಟೆ 4.00 ರಿಂದ 6.30 ರ ವರೆಗೆ ಭೇಟಿಗೆ ಅವಕಾಶವಿದೆ. ಭಕ್ತಾದಿಗಳಿಗೆ ಅನ್ನ ಪ್ರಸಾದ ಸೇವೆಯನ್ನು ಸರಕಾರದ ಮಾರ್ಗಸೂಚಿಯನ್ನು ಅನುಸರಿಸಿ ವ್ಯವಸ್ಥೆ ಮಾಡಲಾಗಿದೆ. ದೇವರ ದರ್ಶನಕ್ಕೆ ಬೆಳಿಗ್ಗೆ 6.30 ರಿಂದ 2.00 ಗಂಟೆ ಸಂಜೆ 5 ರಿಂದ 8 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.

More from the blog

ತುಳುರಂಗಭೂಮಿ‌ ಕಲಾವಿದ ಮೌನೇಶ ಆಚಾರ್ಯ ನಿಧನ..

ಬಂಟ್ವಾಳ : ಪ್ರತಿಭಾನ್ವಿತ ಯುವಕ, ತುಳುರಂಗಭೂಮಿ‌ ಕಲಾವಿದ, ಕಾಪಿಕಾಡು‌ ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಇವರು ಮಂಗಳವಾರ ಮುಂಜಾನೆ ತಮ್ಮ‌ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಚಿನ್ನದ ಕೆಲಸ‌ಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ‌ ದಿನಸಿ‌ ಅಂಗಡಿ...

ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ ಸೋಮವಾರ...

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್...

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...