Thursday, January 29, 2026

ಧರ್ಮಸ್ಥಳ: ಮುನಿಗಳಿಂದ ಮಂಗಲ ಪ್ರವಚನ

ಉಜಿರೆ: ಇಂದಿನ ಪರಿವರ್ತನಶೀಲ ಸಮಾಜದಲ್ಲಿ ಕಾಲಕಾಲಕ್ಕೆ ಮಹಾಪುರುಷರು ಜನ್ಮ ತಾಳುತ್ತಾರೆ. ಅಂತಹ ಪುಣ್ಯ ಪುರುಷರನ್ನು ನಾವೆಲ್ಲಾ ಗೌರವಿಸಬೇಕು ಎಂದು ಆಚಾರ್ಯ ವರ್ಧಮಾನ ಸಾಗರ್‌ಜೀ ಮಹಾರಾಜರು ಹೇಳಿದರು.
ಇಲ್ಲಿ ಶಾಶ್ವತ, ಅಶಾಶ್ವತ ಎಲ್ಲವೂ ಇದೆ. ಪ್ರತೀ ಸಲ ನಮ್ಮ ಹುಟ್ಟು ಹಬ್ಬವನ್ನು ನಾವು ಆಚರಿಸಿಕೊಳ್ಳುತ್ತೇವೆ. ಆಯಸ್ಸು ಮುಗಿಯುತ್ತಲೇ ಹೋಗುತ್ತದೆ. ನಾವೇನು ಮಾಡಿದ್ದೇವೆ ಎಂದು ಚಿಂತಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು. ಆಚಾರ್ಯ ಕೀರ್ತಿ ಸಾಗರ ಮುನಿ ಮಹಾರಾಜರು ಆಶೀರ್ವಚನ ನೀಡಿದರು.
ತಮ್ಮ ಪ್ರವಚನದಲ್ಲಿ, ನಾವು ದೇವಿ ದೇವಸ್ಥಾನಗಳಿಗೆ ಹೋಗುತ್ತವೆ, ಪೂಜಿಸುತ್ತೇವೆ. ಆದರೆ ದೇವಸ್ಥಾನದಿಂದ ಹೊರಬಂದ ಮೇಲೆ ನಾವು ಹೆಣ್ಣನ್ನು ನೋಡುವ ದೃಷ್ಟಿಯೇ ಬದಲಾಗುತ್ತದೆ. ದೇವಸ್ಥಾನದಲ್ಲಿ ಉಪಯೋಗಿಸುವ ಆರತಿ, ಪೂಜಾ, ವಂದನೆ, ಸ್ತುತಿ ಇವೆಲ್ಲವೂ ಸ್ತ್ರೀ ವಾಚಕ ಪದಗಳೇ ಆಗಿವೆ. ಮನೆಯಲ್ಲಿ ಸುಖ,ಶಾಂತಿ, ನೆಮ್ಮದಿ ಬೇಕಾದರೆ ಹೆಣ್ಣು ಇರಲೇ ಬೇಕು. ಹೀಗಿದ್ದರು ಆಕೆಯನ್ನು ನಾವು ಕೀಳು ದೃಷ್ಟಿಯಿಂದ ನೋಡುತ್ತಿರುತ್ತವೆ. ಇದು ನಿಲ್ಲಬೇಕು ಎಂದರು.
ಮಕ್ಕಳಿಗೆ ಮೊಬೈಲು, ಟಿವಿ, ಅಂತರ್ಜಾಲ ವ್ಯವಸ್ಥೆಯನ್ನು ಮಾಡಿಕೊಡುತ್ತೇವೆಯೇ ಹೊರತು ಸಂಸ್ಕಾರ ನೀಡಲು ತಂದೆ ತಾಯಂದಿರಿಗೆ ಪುರುಸೋತ್ತೇ ಇರುವುದಿಲ್ಲ. ಇಂದು ಹಲವಾರು ಪ್ರಸಿದ್ಧ ಶಿಕ್ಷಣ ಸಂಸ್ಥೆಗಳಿದ್ದು ವೈದ್ಯರು, ಇಂಜಿನಿಯರು, ವಕೀಲರನ್ನು ತಯಾರು ಮಾಡುತ್ತವೆಯೇ ಹೊರತು ಆಚಾರ್ಯ ಕುಂದಕುಂದರಂಥಹ ಮಹಾನ್ ವಿಭೂತಿ ಪುರುಷರನ್ನುಸೃಷ್ಟಿಸುವುದಿಲ್ಲ ಎಂದು ವಿಷಾದಿಸಿದ ಅವರು ಮುನಿಗಳು ಮಾಡುವ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಳ್ಳಬೇಕೇ ಹೊರತು ಬರೀ ಕೇಳಲಿಕ್ಕೆ ಮಾತ್ರ ಅಲ್ಲ ಎಂದು ಸ್ಪಷ್ಟಪಡಿಸಿದರು.
ಆಚಾರ್ಯಕುಮುದನಂದಿ ಮಹಾರಾಜರು ತಮ್ಮ ಮಂಗ ಪ್ರವಚನದಲ್ಲಿ ತಪಸ್ಸು ಮಾಡದಿದ್ದರೆ ಮೋಕ್ಷಸಿಗಲಾರದು.ಕಲ್ಲಿನ ದೇವರ ಮೂರ್ತಿಯನ್ನು ನಾವು ನೋಡುತ್ತೇವೆ, ಪ್ರಾರ್ಥಿಸುತ್ತೇವೆ, ಪೂಜೆ ಸಲ್ಲಿಸುತ್ತೇವೆ ಆದರೆ ನಾವು ಪರಮಾತ್ಮ ಯಾಕೆ ಆಗಬಾರದು ಎಂದು ಯೋಚನೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಮುನಿಸಂಘದವರು, ಆರ್ಯಿಕೆಯವರು ಉಪಸ್ಥಿತರಿದ್ದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...