Thursday, February 13, 2025

ಸಹಕಾರಿ ತರಬೇತಿ ಡಿಪ್ಲೋಮಾ ಪರೀಕ್ಷೆ ಬಂಟ್ವಾಳದ ರಮ್ಯಾ ಗಾಣಿಗ ಪ್ರಥಮ ರ್‍ಯಾಂಕ್

ಬಂಟ್ವಾಳ: ಮೂಡುಬಿದ್ರೆ ಡಿಪ್ಲೋಮಾ ಇನ್ ಕೋ-ಅಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಇದರ ೨೦೧೮ನೇ ಸಾಲಿನ ಅಂತಿಮ ಪರೀಕ್ಷೆಯಲ್ಲಿ ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಜನತಾಗ್ರಹ ನಿವಾಸಿ ರಮ್ಯಾ ಗಾಣಿಗ ಇವರಿಗೆ ಪ್ರಥಮ ರ್‍ಯಾಂಕ್ ದೊರೆತಿದೆ. ಈಕೆ ಬಂಟ್ವಾಳ ಎಸ್‌ವಿಎಸ್ ಪದವಿ ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿದ್ದು, ಇಲ್ಲಿನ ನರಿಕೊಂಬು ಗ್ರಾಮದ ಜನತಾಗ್ರಹ ನಿವಾಸಿ ಕೂಸಪ್ಪ ಗಾಣಿಗ ಮತ್ತು ದೇವಕಿ ಗಾಣಿಗ ದಂಪತಿ ಪುತ್ರಿ.
ಕಳೆದ ಸಾಲಿನಲ್ಲಿ ಮೂಡುಬಿದ್ರೆ ಸಂಸ್ಥೆಯಿಂದ ಒಟ್ಟು 62 ಮಂದಿ ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ ನೋಲನ್ ಫೆರ್ನಾಂಡಿಸ್‌ಗೆ 3ನೇ ರ್‍ಯಾಂಕ್, ನಿಖಿಲ್-8ನೇ ರ್‍ಯಾಂಕ್, ದೀಕ್ಷಿತಾ-9ನೇ ರ್‍ಯಾಂಕ್ ದೊರೆತಿದೆ. ರಾಜ್ಯದಲ್ಲಿ ಒಟ್ಟು 8 ಸಹಕಾರಿ ಡಿಪ್ಲೋಮಾ ತರಬೇತಿ ಸಂಸ್ಥೆಗಳ ಪೈಕಿ 11 ರ್‍ಯಾಂಕಿನಲ್ಲಿ ಮೂಡುಬಿದ್ರೆಗೆ 4 ರ್‍ಯಾಂಕ್ ದೊರೆತಿರುವುದು ಸಂತಸ ತಂದಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಶ್ಯಾಮಲಾ ತಿಳಿಸಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...