Wednesday, February 12, 2025

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮಾದ್ಯಮದವರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಶ್ರೀ ಮಂಜುನಾಥಸ್ವಾಮಿಯು ಅನುಗ್ರಹ ಪಡೆದು ಚುನಾವಣಾ ಯುದ್ದಕ್ಕೆ ಹೊರಟಿದ್ದೇವೆ. ನನಗೆ ಸದಾ ರಕ್ಷಣೆ ನೀಡುವವರು ಶ್ರೀ ಮಂಜುನಾಥ, ಶಿವ. ಹಾಗಾಗಿ ಕ್ಷೇತ್ರಕ್ಕೆ ಬಂದು ದರ್ಶನ ಪಡೆದು ಪೂಜೆ ಸಲ್ಲಿಸಿ ಚುನಾವಣಾ ಕಾರ್ಯಕ್ಕೆ ಇಳಿದಿದ್ದೇನೆ. ಜನ ಆಶೀರ್ವಾದ ಮಾಡುವ ನಂಬಿಕೆಯಿದೆ ಎಂದರು.

ನಾವು ನುಡಿದಂತೆ ನಡೆದಿದ್ದೇವೆ ಎಲ್ಲ ಭರವಸೆಗಳನ್ನೂ ಈಡೇರಿಸಿದ್ದೇವೆ. ಮಾತುಬಿಡ ಮಂಜುನಾಥ ನುಡಿದಂತೆ ನಡೆಯಲು ನಮಗೆ ಶಕ್ತಿ ನೀಡಿದ್ದಾನೆ. ಅದೇ ದೊಡ್ಡ ಆಶೀರ್ವಾದವಾಗಿದೆ. ಜನರು ನೀಡಿದ ಅವಕಾಶದ ಸದುಪಯೋಗ ಪಡೆದುಕೊಂಡು ಜನರ ಋಣ ತೀರಿಸಿದ್ದೇವೆ. ಜನರು ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆಪಿ‌ಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಿಥುನ್ ರೈ, ರಂಜನ್. ಜಿ ಗೌಡ, ನಾಗೇಶ್ ಕುಮಾರ್, ಅಭಿನಂದನ್ ಹರೀಶ್, ಭರತ್, ಅಭಿದೇವ್ ಉಪಸ್ಥಿತರಿದ್ದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ಬಳ್ಳಮಂಜ ಕೈಲಾ ಧರ್ಮಚಾವಡಿ, ಬುನ್ನಾನ್ ಕುಟುಂಬಸ್ಥರ ತರವಾಡಿನ ನೂತನ ಮನೆಯ ಶಿಲಾನ್ಯಾಸ

ಬೆಳ್ತಂಗಡಿ : ಕಲ್ಲುರ್ಟಿ ಪಂಜುರ್ಲಿ ಮೈಸಂದಾಯ ಬನ್ನಾನ್ ಕುಟುಂಬಸ್ಥರ ಪರಿವಾರ ದೈವಗಳ ಸೇವಾ ಟ್ರಸ್ಟ್ (ರಿ.)ಕೈಲಾ ಮಚ್ಚಿನ ಗ್ರಾಮ ಬೆಳ್ತಂಗಡಿ ತಾಲೂಕು ಇದರ ಕೈಲಾಧರ್ಮ ಚಾವಡಿ ಮತ್ತು ತರವಾಡುಮನೆಯ ಶೀಲಾನ್ಯಾಸ ಕಾರ್ಯಕ್ರಮ ಫೆ.9ರಂದು...