Sunday, February 1, 2026

ಬೀದಿ ನಾಯಿ ದಾಳಿಗೆ ಜಿಂಕೆ ಸಾವು

ಉಪ್ಪಿನಂಗಡಿ: ಬೀದಿ ನಾಯಿಯ ದಾಳಿಗೆ ಸಿಲುಕಿ ಜಿಂಕೆಯೊಂದು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯ ವಲಯ ಅರಣ್ಯ ಇಲಾಖಾ ವ್ಯಾಪ್ತಿಯ ಸರಳೀಕಟ್ಟೆ ಹೊಸಮುಗೇರು ಎಂಬಲ್ಲಿ ಸಂಭವಿಸಿದೆ.

ಸುಮಾರು 6ರಿಂದ 8 ವರ್ಷ ಪ್ರಾಯದ ಗಂಡು ಜಿಂಕೆ ಶನಿವಾರ ನಸುಕಿನ ವೇಳೆ ಬಾರ್ಯ ಅರಣ್ಯದಿಂದ ಮೇಯುತ್ತ ಕಾಡಿನ ಅಂಚಿಗೆ ಬಂದಿದ್ದು, ಬೀದಿನಾಯಿಯೊಂದು ಜಿಂಕೆಯ ಮೇಲೆ ದಾಳಿ ನಡೆಸಿದೆ. ನಾಯಿಯ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡ ಜಿಂಕೆಯನ್ನು ಕಂಡ ಸ್ಥಳೀಯರು, ಅರಣ್ಯ ಇಲಾಖಾಧಿಕಾರಿಗಳಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸುವಂತೆ ವಿನಂತಿಸಿದ್ದರು.

ಅರಣ್ಯ ಇಲಾಖಾಧಿಕಾರಿಗಳು ಗಾಯಗೊಂಡ ಜಿಂಕೆಯನ್ನು ಸಮೀಪದ ಪಶು ಚಿಕಿತ್ಸಾಲಯಕ್ಕೆ ಕೊಂಡೊಯ್ಯುವಷ್ಟರಲ್ಲಿ ಜಿಂಕೆ ಸಾವನ್ನಪ್ಪಿತ್ತು. ಉಪ ಅರಣ್ಯಾಧಿಕಾರಿಗಳಾದ ಸಂದೀಪ್, ಕ್ಯಾರೆಲ್ ಮೊಂತೆರೊ, ಅರಣ್ಯ ವೀಕ್ಷಕ ಪ್ರತಾಪ, ವಾಹನ ಚಾಲಕ ಕಿಶೋರ್ ಮತ್ತು ತಂಡದವರು ಜಿಂಕೆಯ ಮೃತ ದೇಹವನ್ನು ಮಣ್ಣಗುಂಡಿಯಲ್ಲಿರುವ ಅರಣ್ಯ ಇಲಾಖೆಯ ಕೇಂದ್ರೀಯ ನಾಟ ಕೇಂದ್ರದಲ್ಲಿ ಅರಣ್ಯ ಸಹಾಯಕ ಸಂರಕ್ಷಣಾಧಿಕಾರಿ ಕಾರ್ಯಪ್ಪ ಉಪಸ್ಥಿತಿಯಲ್ಲಿ ಅಂತ್ಯ ಸಂಸ್ಕಾರ ನಡೆಸಿದರು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...