Wednesday, June 25, 2025

ಡಾ| ಬಿ.ಆರ್.ಅಂಬೇಡ್ಕರ್ ಅವರ  128 ನೇ ಜನ್ಮ ದಿನ ಕಾರ್ಯಕ್ರಮ

ಬಂಟ್ವಾಳ: ತಾಲೂಕು ಪಂಚಾಯತ್ ಬಂಟ್ವಾಳ, ಕಂದಾಯ ಇಲಾಖೆ,  ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಬಂಟ್ವಾಳ ವತಿಯಿಂದ ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ಅವರ  128 ನೇ ಜನ್ಮ ದಿನದ ಕಾರ್ಯಕ್ರಮ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ ಎಸ್ ವೈ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎ.ಆರ್.ಒ.ಮಹೇಶ್ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ಸಂವಿಧಾನ ಶಿಲ್ಪಿ ಡಾ| ಬಿ.ಆರ್ .ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ವಿದ್ಯಾರ್ಥಿಗಳಿಗೆ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಆಗಬೇಕಾಗಿದೆ.
ಇಂತಹ ಮಹಾನ್ ಪುರುಷರ ಜನ್ಮದಿನವನ್ನು ಆಚರಣೆ ಮಾಡಿ ಅವರ ನೆನಪಿಸುವ ಮತ್ತು ಗೌರವ ಸಲ್ಲಿಸುವ ಉತ್ತಮ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮ ದ ಅಧ್ಯಕ್ಷತೆ ಯನ್ನು ಬಂಟ್ವಾಳ ತಹಶಿಲ್ದಾರ ಸಣ್ಣ ರಂಗಯ್ಯ ವಹಿಸಿದ್ದರು.
ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಶಿಕ್ಷಣಾಧಿಕಾರಿ ಶಿವಪ್ರಕಾಶ್, ಶಿಕ್ಷಕ ಗೋಪಾಲಕೃಷ್ಣ ನೇರಳಕಟ್ಟೆ, ಸಿ.ಡಿ.ಪಿ.ಒ ಮಲ್ಲಿಕಾ ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆ ಯ ಸಹಾಯಕ ನಿರ್ದೇಶಕ ಕೆ.ಮೋಹನ್ ಕುಮಾರ್ ಸ್ವಾಗತಿಸಿ ಇ.ಒ.ರಾಜಣ್ಣ ವಂದಿಸಿದರು.

More from the blog

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...

Rain Alert : ರಾಜ್ಯದಲ್ಲಿ ಮುಂಗಾರು ಚುರುಕು – ಕರಾವಳಿ ಸೇರಿ ಹಲವೆಡೆ 3 ದಿನ ಭಾರೀ ಮಳೆ ಸಾಧ್ಯತೆ..

ಮಂಗಳೂರು : ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚುರುಕುಗೊಂಡಿದೆ. ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದರೂ...

ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣೆ

ಬಂಟ್ವಾಳ : ಕವಿ‌, ಸಾಹಿತಿ, ಸಂಘಟಕ ಯುವವಾಹಿನಿಯ ಸಲಹೆಗಾರ ಬಿ ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಆಯೋಜಿಸಲಾತ್ತು. ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ , ವಿಜಯನಗರ, ಬೆಂಗಳೂರು, ಚಿತ್ರದುರ್ಗ,...