Thursday, July 10, 2025

ಬಂಟ್ವಾಳ: ಸರಳವಾಗಿ ಈದ್ ಆಚರಣೆ

ಬಂಟ್ವಾಳ: ಒಂದು ತಿಂಗಳ ಉಪವಾಸ ವ್ರತ ಶನಿವಾರ ಮುಕ್ತಾಯವಾಗಿದ್ದು ರವಿವಾರ ತಾಲೂಕಿನಾದ್ಯಂತ ಮುಸ್ಲಿಮರು ಸರಳವಾಗಿ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಿದರು.

ಕೊರೋನ ಸೋಂಕು ಹಾಗೂ ಲಾಕ್ ಡೌನ್ ನಿಂದ ಈ ಬಾರಿಯ ಈದುಲ್ ಫಿತ್ರ್ ಅನ್ನು ಸರಳವಾಗಿ ಆಚರಿಸುವಂತೆ ಕರಾವಳಿ ಭಾಗದ ಇಬ್ಬರು ಖಾಝಿಗಳು ಸಮುದಾಯಕ್ಕೆ ಮನವಿ ಮಾಡಿದ್ದರು. ಅದರಂತೆ ಮುಸ್ಲಿಮರು ಹೊಸ ಉಡುಪು ಧರಿಸದೆ ಸರಳವಾಗಿ ಈದ್ ಆಚರಿಸಿದರು.

ಕೊರೋನ ಸೋಂಕು ಹರಡುವುದನ್ನು ತಡೆಗಟ್ಟಲು ಈದ್ ಗೆ ಯಾರೂ ಬಟ್ಟೆಬರೆ ಖರೀದಿಸಲು ತೆರಳದಂತೆ ಸಮುದಾಯದ ನಡುವೆ ಸಮುದಾಯದ ನಾಯಕರು ಭಾರೀ ಜಾಗೃತಿ ಮೂಡಿಸಿದ್ದರಿಂದ ಮುಸ್ಲಿಮರು ಬಟ್ಟೆಬರೆ ಖರೀದಿಸದೆ ಸರಳ ಈದ್ ಆಚರಣೆಗೆ ನಿರ್ಧರಿಸಿದ್ದರು.

ಲಾಕ್ ಡೌನ್ ಹಿನ್ನೆಲೆಯಲ್ಲಿ ಮಸೀದಿಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಿರುವುದರಿಂದ ಮುಸ್ಲಿಮರು ಈದ್ ನಮಾಝ್ ಅನ್ನು ಮನೆಯಲ್ಲೇ ನಿರ್ವಹಿಸಿದರು. ರವಿವಾರ ಅನಗತ್ಯ ವಾಹನ ಸಂಚಾರಕ್ಕೆ ಸರಕಾರ ನಿರ್ಬಂಧ ಹಾಕಿರುವುದರಿಂದ ಈದ್ ದಿನದ ಸಂಪ್ರದಾಯದಂತೆ ಈ ಬಾರಿ ಯಾರೂ ಬಂದು ಮಿತ್ರರ ಮನೆಗಳಿಗೆ ತೆರಳಿ ಶುಭ ಹಾರೈಸುವುದು ಇಲ್ಲವಾಗಿದೆ.

ಈದ್ ಪ್ರಯುಕ್ತ ನೀಡುವ ಫಿತ್ರ್ ಝಕಾತ್ (ದಾನ) ಅನ್ನು ಶನಿವಾರ ರಾತ್ರಿಯಿಂದ ರವಿವಾರ ಬೆಳಗ್ಗೆ ವರೆಗೆ ಮುಸ್ಲಿಮರು ನೀಡುತ್ತಿದ್ದರು. ಹಬ್ಬಕ್ಕೆ ತಮ್ಮ ಮನೆಯಲ್ಲಿ ವಿಶಿಷ್ಟ ಅಡುಗೆಯನ್ನು ತಯಾರಿಸಿ ನೆರೆಮನೆಯ ಜನರೊಂದಿಗೆ ಸವಿದು ಹಬ್ಬವನ್ನು ಸಂಭ್ರಮಿಸಿದರು.

More from the blog

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...