Thursday, February 13, 2025

ಲೋಕಸಭೆ ಚುನಾವಣೆ : ನೀತಿ ಸಂಹಿತೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಂಡ ರಚನೆ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಗೆ ಅಂತಿಮ ಸೇರ್ಪಡೆಗೆ ಮಾ.24ರವರೆಗೆ ಅವಕಾಶವಿದ್ದು, ಸದ್ಯ ಮತದಾರರ ಪಟ್ಟಿಯಲ್ಲಿ ಬಂಟ್ವಾಳದಲ್ಲಿ ಒಟ್ಟು 227956 ಮತದಾರರು ಇದ್ದು, 1,12,159 ಪುರುಷರು, 1,15,836 ಮಹಿಳೆಯರು ಇದ್ದಾರೆ. ಯುವ ಮತದಾರರು 4,672 ಇದ್ದು, ಇವರ ಪೈಕಿ 2426 ಪುರುಷರು, 2246 ಮಹಿಳೆಯರು ಇದ್ದಾರೆ. 85ಕ್ಕೂ ಮೇಲ್ಪಟ್ಟವರ ಪೈಕಿ 1774 ಮಂದಿ ಇದ್ದು, ಇವರಲ್ಲಿ 100 ವರ್ಷ ದಾಟಿದವರು 17 ಮಂದಿ, 85ರಿಂದ 89 ವರ್ಷದವರು 1160, 90ರಿಂದ 99ವರ್ಷದವರು 597 ಮಂದಿ ಇದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಡಾ. ಉದಯ ಶೆಟ್ಟಿ ಹೇಳಿದರು.

ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿರುವ ಚುನಾವಣಾ ಕಚೇರಿಯಲ್ಲಿ ಭಾನುವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಂಡಗಳನ್ನು ರಚಿಸಲಾಗಿದ್ದು, ಸಭೆ, ಸಮಾರಂಭ, ಧಾರ್ಮಿಕ ಕಾರ್ಯಕ್ರಮ, ರಾಜಕೀಯ ಸಭೆ, ಪ್ರಚಾರ ಸಭೆ ಇತ್ಯಾದಿಗಳನ್ನು ನಡೆಸಲು ಸಾರ್ವಜನಿಕರು, ರಾಜಕೀಯ ಪಕ್ಷದವರು ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕಾಗಿದೆ. ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳಾಗಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ. ಇದ್ದು, ವಿಧಾನಸಭಾ ಕ್ಷೇತ್ರದ ನೋಡಲ್ ಅಧಿಕಾರಿಯಾಗಿ ಶಮಂತ್ ಕುಮಾರ್ ಇರಲಿದ್ದಾರೆ. ಬಂಟ್ವಾಳ ಕ್ಷೇತ್ರದಲ್ಲಿ ಮೂರು ಚೆಕ್ ಪೋಸ್ಟ್ ಗಳನ್ನು ರಚಿಸಲಾಗಿದ್ದು, ಆನೆಕಲ್ಲು, ಸಾಲೆತ್ತೂರಿನ ಮೆದು, ಹಾಗೂ ಕರೋಪಾಡಿಯ ನೆಲ್ಲಿಕಟ್ಟೆಯಲ್ಲಿ ಇವೆ ಎಂದರು.

ನೀತಿ ಸಂಹಿತೆ ಉಲ್ಲಂಘಿಸಿದರೆ ದೂರು ನೀಡಿ:

ಚುನಾವಣಾ ಸಂಬಂಧಿಸಿದಂತೆ 08255-232500 ಕಂಟ್ರೋಲ್ ರೂಮ್ ನಂಬರ್ ಆಗಿದ್ದು, ದಿನದ 24 ತಾಸುಗಳೂ ಕಾರ್ಯಾಚರಣೆ ನಡೆಸುತ್ತಿವೆ. ನೀತಿ ಸಂಹಿತೆ ಉಲ್ಲಂಘನೆ ದೂರುಗಳನ್ನು ಇದಕ್ಕೆ ನೀಡಬಹುದು ಅಲ್ಲದೆ, ಸಿ-ವಿಝಿಲ್ ಮೊಬೈಲ್ ಆಪ್ ಮೂಲಕ ಜಿಲ್ಲೆಯಲ್ಲಿ ಚುನಾವಣಾ ಸಂಬಂಧಿಸಿದಂತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಫೊಟೋ ಹಾಗೂ ವಿಡಿಯೋಗಳ ಮೂಲಕ ದೂರು ದಾಖಲಿಸಬಹುದಾಗಿದೆ. ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಸುವಿಧಾ ಆಪ್ ಮೂಲಕ ಚುನಾವಣಾ ಪ್ರಚಾರ ಕಾರ್ಯಗಳಿಗೆ ಅನುಮತಿ ಪಡೆಯಬಹುದು ಎಂದರು.

ಚುನಾವಣೆಗೆ ಸಂಬಂಧಿಸಿದಂತೆ ಹಲವು ವಿಚಾರಗಳಿಗೆ ತಾಲೂಕು ಮಟ್ಟದಲ್ಲಿ 15 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಉಪತಹಸೀಲ್ದಾರ್ ನವೀನ್ ಬೆಂಜನಪದವು, ಅಧಿಕಾರಿಗಳಾದ ಶಮಂತ್ ಕುಮಾರ್ ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...