Wednesday, February 12, 2025

ಬಂಟ್ವಾಳದಲ್ಲಿ.80.31 ಶೇ.ಮತದಾನ: ಶಾಂತಿಯುತ ಮತದಾನಕ್ಕೆ ಶ್ರಮಿಸಿದ ಎ.ಆರ್.ಒ.ಮಹೇಶ್ ಮತ್ತು ಎ.ಎಸ್.ಪಿ.ಸೈದುಲು ಅಡಾವತ್ ಅವರಿಗೆ ಅಭಿನಂದನೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಅಂತಿಮವಾಗಿ 80.31 ಶೇ ಮತದಾನವಾಗಿದೆ.
ಒಟ್ಟು 222161 ಮತದಾರರಿದ್ದು ಅದರಲ್ಲಿ 178421 ಜನ ಮತದಾನ ಮಾಡಿದ್ದರು.
87142 ಪುರುಷ ಮತದಾರರು ಶೇ 79.69 ಮತದಾನ ಮಾಡಿದ್ದಾರೆ, 91279 ಮಹಿಳೆಯರು ಶೇ 80.91 ಮತದಾನ ಮಾಡಿದ್ದಾರೆ ಎಂದು ಎ.ಆರ್.ಒ.ಮಹೇಶ್ ತಿಳಿಸಿದ್ದಾರೆ.

ಬಂಟ್ವಾಳ ತಾಲೂಕಿನ ಕೆಲವೊಂದು ಕಡೆಗಳಲ್ಲಿ ಇ.ವಿ.ಎಂ.ಯಂತ್ರಗಳು ಬೆಳಿಗ್ಗೆ ಹೊತ್ತಿನಲ್ಲಿ ಕೈಕೊಟ್ಟು ಮತದಾರರಿಗೆ ಸಮಸ್ಯೆ ಬಿಟ್ಟರೆ ಬಹುತೇಕ ಎಲ್ಲಾ ಕಡೆಗಳಲ್ಲಿ ಯೂ ಶಾಂತಿಯುತ ವಾಗಿ ಮತದಾನ ನಡೆದಿದ್ದು ಬಂಟ್ವಾಳ ತಾಲೂಕಿನ ಹಿರಿಮೆಯನ್ನು ಎತ್ತಿ ಹಿಡಿದಿದೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ತೊಂದರೆ ಗಳಾಗದೆ ಶಾಂತಿಯುತ ಮತದಾನಕ್ಕೆ ಶ್ರಮಿಸಿದ ಸಹಾಯಕ ಚುನಾವಣಾ ಅಧಿಕಾರಿ ಮಹೇಶ್ ಹಾಗೂ ಅವರ ತಂಡ ಮತ್ತು ಕಾನೂನು ಸುವ್ಯವಸ್ಥೆ ಯ ಮೂಲಕ ಶಾಂತಿಯುತ ಮತದಾನ ಅಗುವಂತೆ ಹಗಲಿರುಳು ಶ್ರಮಿಸಿದ ಬಂಟ್ವಾಳ ಉಪವಿಭಾಗ ದ ಎ.ಎಸ್‌. ಪಿ.ಸೈದುಲು ಅಡಾವತ್ ಮತ್ತು ಅವರ ತಂಡಕ್ಕೆ ಬಂಟ್ವಾಳ ಜನತೆಯ ಪರವಾಗಿ ವಿಶೇಷ ಅಭಿನಂದನೆಗಳು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...