Thursday, January 29, 2026

ಬಂಟ್ವಾಳದಲ್ಲಿ.80.31 ಶೇ.ಮತದಾನ: ಶಾಂತಿಯುತ ಮತದಾನಕ್ಕೆ ಶ್ರಮಿಸಿದ ಎ.ಆರ್.ಒ.ಮಹೇಶ್ ಮತ್ತು ಎ.ಎಸ್.ಪಿ.ಸೈದುಲು ಅಡಾವತ್ ಅವರಿಗೆ ಅಭಿನಂದನೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಅಂತಿಮವಾಗಿ 80.31 ಶೇ ಮತದಾನವಾಗಿದೆ.
ಒಟ್ಟು 222161 ಮತದಾರರಿದ್ದು ಅದರಲ್ಲಿ 178421 ಜನ ಮತದಾನ ಮಾಡಿದ್ದರು.
87142 ಪುರುಷ ಮತದಾರರು ಶೇ 79.69 ಮತದಾನ ಮಾಡಿದ್ದಾರೆ, 91279 ಮಹಿಳೆಯರು ಶೇ 80.91 ಮತದಾನ ಮಾಡಿದ್ದಾರೆ ಎಂದು ಎ.ಆರ್.ಒ.ಮಹೇಶ್ ತಿಳಿಸಿದ್ದಾರೆ.

ಬಂಟ್ವಾಳ ತಾಲೂಕಿನ ಕೆಲವೊಂದು ಕಡೆಗಳಲ್ಲಿ ಇ.ವಿ.ಎಂ.ಯಂತ್ರಗಳು ಬೆಳಿಗ್ಗೆ ಹೊತ್ತಿನಲ್ಲಿ ಕೈಕೊಟ್ಟು ಮತದಾರರಿಗೆ ಸಮಸ್ಯೆ ಬಿಟ್ಟರೆ ಬಹುತೇಕ ಎಲ್ಲಾ ಕಡೆಗಳಲ್ಲಿ ಯೂ ಶಾಂತಿಯುತ ವಾಗಿ ಮತದಾನ ನಡೆದಿದ್ದು ಬಂಟ್ವಾಳ ತಾಲೂಕಿನ ಹಿರಿಮೆಯನ್ನು ಎತ್ತಿ ಹಿಡಿದಿದೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ತೊಂದರೆ ಗಳಾಗದೆ ಶಾಂತಿಯುತ ಮತದಾನಕ್ಕೆ ಶ್ರಮಿಸಿದ ಸಹಾಯಕ ಚುನಾವಣಾ ಅಧಿಕಾರಿ ಮಹೇಶ್ ಹಾಗೂ ಅವರ ತಂಡ ಮತ್ತು ಕಾನೂನು ಸುವ್ಯವಸ್ಥೆ ಯ ಮೂಲಕ ಶಾಂತಿಯುತ ಮತದಾನ ಅಗುವಂತೆ ಹಗಲಿರುಳು ಶ್ರಮಿಸಿದ ಬಂಟ್ವಾಳ ಉಪವಿಭಾಗ ದ ಎ.ಎಸ್‌. ಪಿ.ಸೈದುಲು ಅಡಾವತ್ ಮತ್ತು ಅವರ ತಂಡಕ್ಕೆ ಬಂಟ್ವಾಳ ಜನತೆಯ ಪರವಾಗಿ ವಿಶೇಷ ಅಭಿನಂದನೆಗಳು.

More from the blog

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...