Saturday, June 28, 2025

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ ಪರಮ ಶಿಷ್ಯ, ಪುದು ಗ್ರಾಮ ಪಂಚಾಯತ್‌ನ ಮಾಜಿ ಉಪಾಧ್ಯಕ್ಷರು ಮತ್ತು ಹಾಲಿ ಸದಸ್ಯರಾದ ಹಾಶೀರ್ ಪೇರಿಮಾರ್ ರವರು 4,667 ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಈ ಹುದ್ದೆಗೆ ಜಿಲ್ಲಾ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರದ ಒಟ್ಟು 20 ಜನ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಸ್ಪರ್ಧಿಸಿದರು.

ಇಬ್ರಾಹಿಂ ಬಾತಿಷಾ ಆತೂರು 4265 ಮತಗಳನ್ನು ಪಡೆದು ಎರಡನೇ ಸ್ಥಾನ ತಲುಪಿದ್ದಾರೆ. ಇನ್ನು ಮೊಹಮ್ಮದ್ ಉನೈಸ್ 2323 ಮತಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ಎಐಸಿಸಿ ಚುನಾವಣೆ ಸಮಿತಿ ಯುವ ಕಾಂಗ್ರೆಸ್‌ನ ಎಲ್ಲ ಹಂತದ ಘಟಕಗಳಿಗೆ ನೋಂದಣಿ ಮಾಡಿಕೊಂಡಿತ್ತು. ರಾಜ್ಯ ಘಟಕ, ಜಿಲ್ಲಾ ಘಟಕ, ಬ್ಲಾಕ್ ಘಟಕಗಳಿಗೆ ವಿವಿಧ ಹುದ್ದೆಗಳಿಗೆ ಏಕ ಕಾಲಕ್ಕೆ ಮತದಾನ ನಡೆದಿತ್ತು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

Bantwal : ಬಂಟ್ವಾಳ ಪುರಸಭೆಯ ವಿಶೇಷ ಸಭೆ : ಪೌರಕಾರ್ಮಿಕರ ವೇತನ ಕುರಿತು ಚರ್ಚೆ..

ಬಂಟ್ವಾಳ : ಪೌರಕಾರ್ಮಿಕರ ವೇತನ ವಿಚಾರಕ್ಕೆ ಸಂಬಂಧಿಸಿದಂತೆ ಪುರಸಭಾ ವಿಶೇಷ ಸಭೆ ಬಂಟ್ವಾಳ ಪುರಸಭಾ ಅಧ್ಯಕ್ಷ ವಾಸು ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಪುರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಿತು. ಪುರಸಭೆಯ ಪೌರಕಾರ್ಮಿಕರ ವಿಶೇಷ ನೇಮಕಾತಿ ಹಾಗೂ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಇಂದಿನಿಂದ ಮುಹರ್ರಮ್ ತಿಂಗಳು ಪ್ರಾರಂಭ : ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಘೋಷಣೆ..

ಮಾಣಿ: ಗುರುವಾರ ರಾತ್ರಿ ಚಂದ್ರದರ್ಶನವಾದ ಮಾಹಿತಿ ಪ್ರಬಲವಾಗಿರುವುದರಿಂದ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ಹಾಗೂ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದರ ಬಳಿ ಖಚಿತವಾದ ಕಾರಣ ಇಂದಿನಿಂದ ಮುಹರ್ರಮ್ ಪ್ರಾರಂಭ ಎಂದು ಖಾಝಿ...