Thursday, July 10, 2025

ಬಂಟ್ವಾಳ ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿಗೆ ಚುನಾವಣೆ

ಬಂಟ್ವಾಳ: ರಾಜ್ಯ ಸರಕಾರಿ ನೌಕರರ ಸಂಘ (ರಿ.) ಬಂಟ್ವಾಳ ಇದರ 2019 -2024 ರ ಅವಧಿಗೆ ನೂತನ ಕಾರ್ಯಕಾರಿ ಸಮಿತಿಗೆ ಚುನಾವಣೆ ಗುರುವಾರ ಸರಕಾರಿ ನೌಕರರ ಕಚೇರಿಯಲ್ಲಿ ನಡೆಯಿತು. ಸರಕಾರಿ ನೌಕರರ 24 ಇಲಾಖೆಗಳು ಚುನಾವಣೆಯಲ್ಲಿ ಪ್ರತಿನಿಧಿಸುತ್ತಿದೆ. 35 ಪ್ರತಿನಿಧಿಗಳು ಚುನಾಯಿತರಾಗಿ ಆಯ್ಕೆಯಾಗಬೇಕಾಗಿದೆ.

ಅದರಲ್ಲಿ ಈ ಬಾರಿ 12 ಇಲಾಖೆಗಳ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 10 ಇಲಾಖೆಗಳ ಪ್ರತಿನಿಧಿಗಳು ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ, ಉಳಿದಂತೆ ಎರಡು ಇಲಾಖೆಗಳ ಪ್ರತಿನಿಧಿಗಳು ಕಾರ್ಯಕಾರಿ ಸಮಿತಿಗೆ ಆಯ್ಕೆಗಾಗಿ ಚುನಾವಣೆ ನಡೆಯಿತು.


ಪ್ರಾಥಮಿಕ ಶಿಕ್ಷಣ ಇಲಾಖೆ ಹಾಗೂ ಕಂದಾಯ ಇಲಾಖೆಯ ಚುನಾವಣೆ ಇಂದು ನಡೆಯುತ್ತಿದೆ.
ಕಂದಾಯ ಇಲಾಖೆ ಯಲ್ಲಿ ಒಟ್ಟು ಎರಡು ಪ್ರತಿನಿಧಿಗಳು ಆಯ್ಕೆಯಾಗಬೇಕಿದ್ದು 5 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಪ್ರಾಥಮಿಕ ಶಿಕ್ಷಣ ಇಲಾಖೆಯಲ್ಲಿ 3 ಪ್ರತಿನಿಧಿಗಳು ಆಯ್ಕೆಯಾಗಬೇಕಿದ್ದು, 4 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.

ಬೆಳಿಗ್ಗೆ 11 ರಿಂದ ಸಂಜೆ 4 ,ಗಂಟೆಯವರೆಗೆ ಚುನಾವಣೆ ನಡೆಯುತ್ತದೆ, ಬಳಿಕ 6 ಗಂಟೆಗೆ ಫಲಿತಾಂಶ ಹೊರಬೀಳುವ ನಿರೀಕ್ಷೆ.
ಜೂನ್ 27 ರಂದು ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ ನೂತನ ಪದಾಧಿಕಾರಿ ಚುನಾವಣೆ ನಡೆಯಲಿದೆ.
ಚುನಾವಣಾಧಿಕಾರಿಯಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯ ರಮೇಶ್ ನಾಯಕ್ ರಾಯಿ, ಹಾಗೂ ಮತಗಟ್ಟೆ ಅಧಿಕಾರಿಯಾಗಿ ಕೊಡಂಗೆ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಭಾಸ್ಕರ್ ರಾವ್ ಕಾರ್ಯ ನಿರ್ವಹಿಸಿದರು.

ಶಿಕ್ಷಣ ಇಲಾಖೆಯ ದೊಡ್ಡ ಕೆಂಪಯ್ಯ, ಪ್ರಾನ್ಸಿಸ್ ಡೇಸಾ, ರವಿಕುಮಾರ್, ಸಂತೋಷ ಕುಮಾರ್.
ಕಂದಾಯ ಇಲಾಖೆಯ ಸೀತಾರಾಮ್, ಜೆ.ಜನಾರ್ಧನ, ಮಲ್ಲೇಶ್, ಮಂಜುನಾಥ್ , ತೌಪೀಕ್ ಅವರು ಕಣದಲ್ಲಿ ಇವರಿಗೆ ಸ್ಪರ್ಧೆ ನಡಯುತ್ತಿದೆ.

More from the blog

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...