Friday, July 11, 2025

ಪಂಚಾಯತ್ ಗೆ ಆಡಳಿತಾಧಿಕಾರಿ ಬೇಡ, ಚುನಾವಣೆ ವರೆಗೆ ಈಗಿನ ಆಡಳಿತವನ್ನೇ ಮುಂದುವರಿಸಿ

ಬಂಟ್ವಾಳ: ಕೊರೋನ ಸೋಂಕಿನ ಲಾಕ್ ಡೌನ್ ಹಿನ್ನೆಲೆಯಲ್ಲಿ ಈ ತಿಂಗಳು ನಡೆಯಬೇಕಿದ್ದ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಮುಂದೂಡಿರುವ ಸರ್ಕಾರ ಗ್ರಾಮ ಪಂಚಾಯತ್ ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಮುಂದಾಗಿರುವುದು ಸರಿಯಲ್ಲ, ಈ ನಿರ್ಧಾರವನ್ನು ತಕ್ಷಣವೇ ಕೈಬಿಟ್ಟು ಪ್ರಸ್ತುತ ಇರುವ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಿರುವ ಸಮಿತಿಯ ಸ್ಥಳೀಯ ಸರಕಾರವನ್ನೇ ಮುಂದುವರಿಸಬೇಕೆಂದು ಬಂಟ್ವಾಳ ತಾಲೂಕು ಸುಗ್ರಾಮ ಗ್ರಾಮ ಪಂಚಾಯತ್ ಚುನಾಯಿತ ಮಹಿಳಾ ಪ್ರತಿನಿಧಿಗಳ ಸಂಘ ಒತ್ತಾಯಿಸಿದೆ.
ಸುಗ್ರಾಮ ಒಕ್ಕೂಟವು ಗ್ರಾಮ ಪಂಚಾಯತಿ ಚುನಾವಣೆ ನಡೆಯುವವರೆಗೆ ಹೀಗಿರುವ ಪ್ರಸ್ತುತ ಸಮಯದಲ್ಲಿ ನಾವು ಸ್ಥಳೀಯ ಸರಕಾರದ ಅವಿಭಾಜ್ಯ ಅಂಗವಾಗಿ ವಿಕೋಪವನ್ನು ಕೋವಿಡ್-19 ವಿರುದ್ಧ ಸಮರ್ಥವಾಗಿ ನಿಭಾಯಿಸುವಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಉತ್ತರದಾಯಿಯಾಗಿ ಕಾರ್ಯನಿರ್ವಹಿಸುತ್ತಿರುತ್ತವೆ. ಚುನಾಯಿತ ವರ್ಗ ಹಾಗೂ ಅಧಿಕಾರಿ ವರ್ಗದೊಂದಿಗೆ ಒಗ್ಗೂಡಿ ಆಡಳಿತವನ್ನು ನಡೆಸಿದೆ. ಕಳೆದ 50 ದಿನಗಳಿಂದ ಪ್ರತಿ ಪಂಚಾಯತ್ ನಲ್ಲಿ ಸೋಂಕಿನ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಿ ಬೇರೆ ಕಡೆಯಿಂದ ವಲಸೆ ಬಂದ ಕೂಲಿಕಾರ್ಮಿಕರನ್ನು ಸಮರ್ಪಕವಾಗಿ ಕ್ವಾರಂಟೈನ್ ಮಾಡಿ ಮತ್ತು ಅವರಿಗೆ ಬೇಕಾಗುವ ಆಹಾರ ಸಾಮಗ್ರಿಗಳನ್ನು ನೀಡಿ ಮಾನವೀಯತೆಯನ್ನು ತೋರಿದ್ದೇವೆ. ಈ ಸವಾಲಿನ ಸಮಯದಲ್ಲಿ ಪಂಚಾಯಿತಿ ಆಡಳಿತಕ್ಕೆ ಕೇವಲ ಆಡಳಿತ ಅಧಿಕಾರಿಯ ಅಥವಾ ಉಸ್ತುವಾರಿ ಸಮಿತಿಯ ನೇಮಕ ಅಸಮಂಜಸವಾದದ್ದು ಎಂದಿರುವ ಒಕ್ಕೂಟ ಸರ್ಕಾರ ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿದೆ.

More from the blog

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಅಪಹರಣ ಮತ್ತು ವಂಚನೆ ಪ್ರಕರಣದ ಆರೋಪಿಯೋರ್ವ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ‌ನಡೆದಿದೆ. ಬಂಟ್ವಾಳ...