Thursday, February 13, 2025

ಬಂಟ್ವಾಳದಲ್ಲಿ ಚುನಾವಣೆಗೆ ಸಿದ್ಧತೆ

ಬಂಟ್ವಾಳ: ಎ. 18ರ ಬೆಳಗ್ಗೆ 7 ಗಂಟೆಯಿಂದ ಆರಂಭಗೊಳ್ಳುವ ಲೋಕಸಭಾ ಚುನಾವಣೆಯ ಮಸ್ಟರಿಂಗ್ ಕಾರ್ಯ ಬುಧವಾರ ಮೊಡಂಕಾಪು ಶಾಲೆಯಲ್ಲಿ ನಡೆಯಿತು.
ರಾಜ್ಯ ಚುನಾವಣಾ ಪರಿವೀಕ್ಷರು  ಬೆಳಿಗ್ಗೆ ಮೊಡಂಕಾಪುವಿಗೆ  ಆಗಮಿಸಿ, ಜಿಪಂ ಸಿಇಒ ಡಾ. ಸೆಲ್ವಮಣಿ, ಎಆರ್ ಒ ಮಹೇಶ್  ಮತ್ತು ತಹಶೀಲ್ದಾರ್ ಸಣ್ಣ ರಂಗಯ್ಯ ಅವರಿಂದ ಮಸ್ಟರಿಂಗ್ ಕಾರ್ಯದ ಮಾಹಿತಿ ಪಡೆದರು.
ಶಾಂತಿಯುತ ಮತದಾನಕ್ಕೆ ಹೆಚ್ಚಿನ ಬಂದೋಬಸ್ತ್ ಕಾರ್ಯಗಳನ್ನು ನಡೆಸಲಾಗಿದೆ. ಯಾವುದೇ ಗೊಂದಲಗಳಿಲ್ಲದೆ ಚುನಾವಣೆ ನಡೆಯಲಿದೆ ಎಂದು ಜಿಪಂ ಸಿಇಒ ಡಾ.ಸೆಲ್ವಮಣಿ ಮಾಹಿತಿ ನೀಡಿದರು.
ಚುನಾವಣೆಗೆ ತಾಲೂಕು ಆಡಳಿತ ಸಂಪೂರ್ಣವಾಗಿ ಸಜ್ಜಾಗಿದೆ. ಯಾವುದೇ ಬೂತ್ ಗಳಲ್ಲಿ ಗೊಂದಲಗಳ ನಡೆಯದಂತೆ ಹೆಚ್ಚಿನ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಹೆಚ್ಚಿನ ನಿಗಾ ವಹಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಾಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಮಾಹಿತಿ ನೀಡಿದರು.
ಇದೇ ವೇಳೆ ಬಂಟ್ವಾಳ ಕ್ಷೇತ್ರದ 249 ಮತಗಟ್ಟೆಗಳಿಗೆ ಮತಗಟ್ಟೆಯ ಸಿಬ್ಬಂದಿಗಳು ಮತದಾನ ಪ್ರಕ್ರಿಯೆಗೆ ಬೇಕಾದ ಇವಿಎಂ ಯಂತ್ರಗಳ ಸಹಿತ ನಾನಾ ಸಿದ್ಧತೆಗಳನ್ನು ಪರಿಶೀಲಿಸಿ ತಮ್ಮ ಬೂತ್ ಗಳಿಗೆ ತೆರಳಿದರು.

More from the blog

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕದ ವಾರ್ಷಿಕೋತ್ಸವ

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ ಇದರ ವಾರ್ಷಿಕೋತ್ಸವ ಹಾಗೂ ಮಹಾಸಭೆಯು ಶಾರದಾ ಸಭಾಭವನ ರಾಮಲ್ಕಟ್ಟೆ ತುಂಬೆಯಲ್ಲಿ ನಡೆಯಿತು. ಪುರ್ವಾನ್ಹ ವಾರ್ಷಿಕೋತ್ಸವವನ್ನು ಸಂಘದ ಅಧ್ಯಕ್ಷರಾದ ಶಿವಕುಮಾರ್ ಉದ್ಘಾಟಿಸಿದರು. ಅಪರಾನ್ಹ 3 ಘಂಟೆಗೆ...

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...