Tuesday, January 27, 2026

ಬಂಟ್ವಾಳದಲ್ಲಿ ಚುನಾವಣೆಗೆ ಸಿದ್ಧತೆ

ಬಂಟ್ವಾಳ: ಎ. 18ರ ಬೆಳಗ್ಗೆ 7 ಗಂಟೆಯಿಂದ ಆರಂಭಗೊಳ್ಳುವ ಲೋಕಸಭಾ ಚುನಾವಣೆಯ ಮಸ್ಟರಿಂಗ್ ಕಾರ್ಯ ಬುಧವಾರ ಮೊಡಂಕಾಪು ಶಾಲೆಯಲ್ಲಿ ನಡೆಯಿತು.
ರಾಜ್ಯ ಚುನಾವಣಾ ಪರಿವೀಕ್ಷರು  ಬೆಳಿಗ್ಗೆ ಮೊಡಂಕಾಪುವಿಗೆ  ಆಗಮಿಸಿ, ಜಿಪಂ ಸಿಇಒ ಡಾ. ಸೆಲ್ವಮಣಿ, ಎಆರ್ ಒ ಮಹೇಶ್  ಮತ್ತು ತಹಶೀಲ್ದಾರ್ ಸಣ್ಣ ರಂಗಯ್ಯ ಅವರಿಂದ ಮಸ್ಟರಿಂಗ್ ಕಾರ್ಯದ ಮಾಹಿತಿ ಪಡೆದರು.
ಶಾಂತಿಯುತ ಮತದಾನಕ್ಕೆ ಹೆಚ್ಚಿನ ಬಂದೋಬಸ್ತ್ ಕಾರ್ಯಗಳನ್ನು ನಡೆಸಲಾಗಿದೆ. ಯಾವುದೇ ಗೊಂದಲಗಳಿಲ್ಲದೆ ಚುನಾವಣೆ ನಡೆಯಲಿದೆ ಎಂದು ಜಿಪಂ ಸಿಇಒ ಡಾ.ಸೆಲ್ವಮಣಿ ಮಾಹಿತಿ ನೀಡಿದರು.
ಚುನಾವಣೆಗೆ ತಾಲೂಕು ಆಡಳಿತ ಸಂಪೂರ್ಣವಾಗಿ ಸಜ್ಜಾಗಿದೆ. ಯಾವುದೇ ಬೂತ್ ಗಳಲ್ಲಿ ಗೊಂದಲಗಳ ನಡೆಯದಂತೆ ಹೆಚ್ಚಿನ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಹೆಚ್ಚಿನ ನಿಗಾ ವಹಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಾಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಮಾಹಿತಿ ನೀಡಿದರು.
ಇದೇ ವೇಳೆ ಬಂಟ್ವಾಳ ಕ್ಷೇತ್ರದ 249 ಮತಗಟ್ಟೆಗಳಿಗೆ ಮತಗಟ್ಟೆಯ ಸಿಬ್ಬಂದಿಗಳು ಮತದಾನ ಪ್ರಕ್ರಿಯೆಗೆ ಬೇಕಾದ ಇವಿಎಂ ಯಂತ್ರಗಳ ಸಹಿತ ನಾನಾ ಸಿದ್ಧತೆಗಳನ್ನು ಪರಿಶೀಲಿಸಿ ತಮ್ಮ ಬೂತ್ ಗಳಿಗೆ ತೆರಳಿದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...