ಬಂಟ್ವಾಳ : ತೀವ್ರ ಕುತೂಹಲ ಕೆರಳಿಸಿದ್ದ ಮಾಣಿ ಗ್ರಾಮಪಂಚಾಯತ್ ನ 10 ಸ್ಥಾನಗಳ ಪೈಕಿ ಕಾಂಗ್ರೇಸ್ ಬೆಂಬಲಿತರಾಗಿ ಸ್ಪರ್ಧಿಸಿದ್ದ 8 ಮಂದಿ ಅಭ್ಯರ್ಥಿ ಗಳು ಜಯಗಳಿಸುವ ಮೂಲಕ ಕಾಂಗ್ರೇಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.
ಇಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀಪ್ ಕುಮಾರ್ ಸ್ವತಃ ಚುನಾವಣೆಗೆ ಸ್ಪರ್ಧಿಸಿ ವಿಜಯ ಸಾಧಿಸಿದ್ದು, ಉಳಿದಂತೆ ಕಾಂಗ್ರೇಸ್ ಬೆಂಬಲಿತರಾಗಿ ಸ್ಪರ್ಧಿಸಿದ್ದ ಇಬ್ರಾಹಿಂ ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಸೀತಾ, ರಮಣಿ, ಬಾಲಕೃಷ್ಣ ಆಳ್ವ, ಪ್ರೀತಿ ಪಿರೇರಾ, ಸುಜಾತ ಗೆಲುವು ಸಾಧಿಸಿದ್ದು, ಬಿಜೆಪಿ ಬೆಂಬಲಿತ ಪೈಕಿ ನಾರಾಯಣ ಶೆಟ್ಟಿ ಕೊಂಬಿಲ ಹಾಗೂ ಮಿತ್ರಾಕ್ಷಿ ಗೆಲುವು ಸಾಧಿಸಿದ್ದಾರೆ. ಕಳೆದ ಗ್ರಾಮಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೇಸ್ ಹಾಗೂ ಬಿಜೆಪಿ ತಲಾ 5 ಸ್ಥಾನಗಳನ್ನು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಅದೃಷ್ಟಚೀಟಿಯ ಮೂಲಕ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿತ್ತು. ಈ ಬಾರಿ ಕಾಂಗ್ರೇಸ್ 8 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ.














