Wednesday, February 12, 2025

ಬಂಟ್ವಾಳ : ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿಗೆ ಅಯ್ಕೆ

ಬಂಟ್ವಾಳ: ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ಇದರ 2019 -2024 ರ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಗೆ ಇಂದು ಚುನಾವಣೆ ನಡೆದಿದ್ದು ಫಲಿತಾಂಶ ಹೊರಬಿದ್ದಿದೆ.

ಕಂದಾಯ ಇಲಾಖೆಯಿಂದ ಜನಾರ್ದನ ಕೆ.
ಮಂಜುನಾಥ್ ಎಚ್.
ಶಿಕ್ಷಣ ಇಲಾಖೆ ಪ್ರಾನ್ಸಿಸ್ ಡೇಸಾ, ರವಿ ಕುಮಾರ್, ಸಂತೋಷ್ ಕುಮಾರ್.
ಅವರು ಆಯ್ಕೆಯಾಗಿ ದ್ದಾರೆ.

ರಾಜ್ಯ ಸರಕಾರಿ ನೌಕರರ ಸಂಘ ( ರಿ.) ಬಂಟ್ವಾಳ ಇದರ 2019 -2024 ರ ಅವಧಿಗೆ ನೂತನ ಕಾರ್ಯಕಾರಿ ಸಮಿತಿಗೆ ಚುನಾವಣೆ ಗುರುವಾರ ಸರಕಾರಿ ನೌಕರರ ಕಚೇರಿಯಲ್ಲಿ ನಡೆಯಿತು .

ಸರಕಾರಿ ನೌಕರರ 24 ಇಲಾಖೆ ಗಳು ಚುನಾವಣೆಯಲ್ಲಿ ಪ್ರತಿನಿಧಿಸುತ್ತಿದೆ.

35 ಪ್ರತಿನಿಧಿಗಳು ಚುನಾಯಿತರಾಗಿ ಆಯ್ಕೆಯಾಗಬೇಕಾಗಿದೆ.

ಅದರಲ್ಲಿ ಈ ಬಾರಿ 12 ಇಲಾಖೆಗಳ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
10 ಇಲಾಖೆ ಗಳ ಪ್ರತಿನಿಧಿಗಳು ನಾಮನಿರ್ದೇಶನ ಸದಸ್ಯ ರಾಗಿ ಅಯ್ಕೆ, ಉಳಿದಂತೆ ಎರಡು ಇಲಾಖೆಗಳ ಪ್ರತಿನಿಧಿಗಳು ಕಾರ್ಯಕಾರಿ ಸಮಿತಿಗೆ ಆಯ್ಕೆಗಾಗಿ ಚುನಾವಣೆ ನಡೆಯಿತು.

ಪ್ರಾಥಮಿಕ ಶಿಕ್ಷಣ ಇಲಾಖೆ ಹಾಗೂ ಕಂದಾಯ ಇಲಾಖೆಯ ಚುನಾವಣೆ ಇಂದು ನಡೆಯಿತು.

ಕಂದಾಯ ಇಲಾಖೆ ಯಲ್ಲಿ ಒಟ್ಟು ಎರಡು ಪ್ರತಿನಿಧಿಗಳು ಆಯ್ಕೆಯಾಗಬೇಕಿದ್ದು 5 ಅಭ್ಯರ್ಥಿಗಳು ಕಣದಲ್ಲಿದ್ದರು.

ಪ್ರಾಥಮಿಕ ಶಿಕ್ಷಣ ಇಲಾಖೆಯಲ್ಲಿ 3 ಪ್ರತಿನಿಧಿಗಳು ಆಯ್ಕೆಯಾಗಬೇಕಿದ್ದು, 4 ಅಭ್ಯರ್ಥಿಗಳು ಕಣದಲ್ಲಿ ಇದ್ದರು.

ಶಿಕ್ಷಣ ಇಲಾಖೆಯ ದೊಡ್ಡ ಕೆಂಪಯ್ಯ, ಪ್ರಾನ್ಸಿಸ್ ಡೇಸಾ, ರವಿಕುಮಾರ್, ಸಂತೋಷ ಕುಮಾರ್.
ಕಂದಾಯ ಇಲಾಖೆ ಯ ಸೀತಾರಾಮ್, ಜೆ.ಜನಾರ್ಧನ, ಮಲ್ಲೇಶ್, ಮಂಜುನಾಥ್ , ತೌಪೀಕ್ ಅವರು ಕಣದಲ್ಲಿದ್ದು ಇವರಿಗೆ ಸ್ಪರ್ಧೆ ನಡಯಿತು.

ಬೆಳಿಗ್ಗೆ 11 ರಿಂದ ಸಂಜೆ 4 ,ಗಂಟೆಯವರೆಗೆ ಚುನಾವಣೆ ನಡೆಯಿತು.

ಜೂನ್ 27 ರಂದು ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ ನೂತನ ಪದಾಧಿಕಾರಿ ಚುನಾವಣೆ ನಡೆಯಲಿದೆ.
ಚುನಾವಣಾಧಿಕಾರಿಯಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯೋಪಾಧ್ಯಾಯ ರಮೇಶ್ ನಾಯಕ್ ರಾಯಿ, ಹಾಗೂ ಮತಗಟ್ಟೆ ಅಧಿಕಾರಿಯಾಗಿ ಕೊಡಂಗೆ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಭಾಸ್ಕರ್ ರಾವ್ ಕಾರ್ಯ ನಿರ್ವಹಿಸಿದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...