Friday, June 27, 2025

ಬಂಟ್ವಾಳ ತಾಲೂಕು ಇಂಜಿನಿಯರ್‍ಸ್ ಎಸೋಸಿಯೇಶನ್ ಆಶ್ರಯದಲ್ಲಿ ಇಂಜಿನಿಯರ್‍ ದಿನಾಚರಣೆ

ಬಂಟ್ವಾಳ: ತಾಲೂಕು ಇಂಜಿನಿಯರ್‍ಸ್ ಎಸೋಸಿಯೇಶನ್ ಇದರ ಆಶ್ರಯದಲ್ಲಿ ಭಾರತರತ್ನ ಸರ್‍. ಎಂ. ವಿಶ್ವೇಶ್ವರಯ್ಯರವರ ೧೫೯ನೇ ಜನ್ಮ ದಿನಾಚರಣೆ ಇಂಜಿನಿಯರ್‍ ದಿನಾಚರಣೆ ಬಿಸಿ ರೋಡಿನ ಹೋಟೆಲ್ ಶ್ರೀನಿವಾಸ್ ರೆಸಿಡೆನ್ಸಿಯಲ್ಲಿ ಇತ್ತೀಚೆಗೆ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಯೋಜನಾ ಪಾಧಿಕಾರ ಸದಸ್ಯ ಕಾರ್‍ಯದರ್ಶಿ ಇಂಜಿನಿಯರ್‍ ಅಭಿಲಾಶ್ ಎಂ.ಪಿ.ಯವರು ಸರ್‍.ಎಂ.ವಿಶ್ವೇಶ್ವರಯ್ಯ ರವರು ದೇಶ ಕಂಡ ಅಪ್ರತಿಮ ಮೇಧಾವಿ, ಅವರು ಕೇವಲ ಇಂಜಿನಿಯರ್‍ ಆಗಿರದೆ ದಕ್ಷ ಆಡಳಿತಗಾರ ಹಾಗೂ ಆರ್ಥಿಕ ತಜ್ಞರಾಗಿದ್ದರು. ಅವರ ಕಾರ್ಯ ದಕ್ಷತೆ, ಪ್ರಾಮಾಣಿಕತೆಯನ್ನು ಇಂಜಿನಿಯರವರು ಅಳವಡಿಸಿಕೊಂಡಾಗ ಪ್ರತಿಯೊಬ್ಬರು ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ , ಸುಂದರ ನಗರ ನಿರ್ಮಾಣದಲ್ಲಿ ಇಂಜಿನಿಯರ್‍ ರವರ ಪಾತ್ರ ಮಹತ್ವದ್ದು ಎಂಬ ಆಶಯ ವ್ಯಕ್ತಪಡಿಸಿದರು.


ಎಸೋಸಿಯೇಶನ್ ಅಧ್ಯಕ್ಷ ಇಂಜಿನಿಯರ್‍ ಅಜಯ್ ಪ್ರದೀಪ್ ಅಧ್ಯಕ್ಷತೆ ವಹಿಸಿದರು, ಇಂಜಿನಿಯರ್‍ ಸತೀಶ್ ಕುಲಾಲ್ ಸ್ವಾಗತಿಸಿ ತಾರಾನಾಥ ಕೊಟ್ಟಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಇಂಜಿನಿಯರ್‍ ಸುಧೀರ್‍ ಶೆಟ್ಟಿ ಕೋಶಾಧಿಕಾರಿ ಇಂಜಿನಿಯರ್‍ ಪ್ರಾನ್ಸೀಸ್ ಡಿ.ಕುನ್ಹ ಜೊತೆಕಾರ್ಯದರ್ಶಿ ಇಂಜಿನಿಯರ್‍ ರಾಜೇಶ ಬಿ.ಉಪಸ್ಥಿತರಿದ್ದರು. ಬಂಟ್ವಾಳ ತಾಲೂಕಿನ ಎಲ್ಲಾ ಸಿವಿಲ್ ಎಂಜಿನಿಯರ್‍ ಸಭೆಯಲ್ಲಿ ಭಾಗವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಇಂಜಿನಿಯರ್‍ ಪ್ರಕಾಶ್ ಬಿ. ಧನ್ಯವಾದ ನೀಡಿದರು. ಇಂಜಿನಿಯರ್‍ ಶ್ರೀನಿಧಿ ಭಟ್ ಪ್ರಾಥಿಸಿ , ಕಾರ್ಯಕ್ರಮ ನಿರೂಪಿಸಿದರು

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...