Saturday, January 31, 2026

ಆಂಗ್ಲ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ರವೀಂದ್ರನ್ ಪುನರಾಯ್ಕೆ

ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಆಂಗ್ಲ ಉಪನ್ಯಾಸಕರ ಸಂಘದ ಮುಂದಿನ ಎರಡು ವರ್ಷದ ಅವಧಿಗೆ ಬಂಟ್ವಾಳ ಎಸ್ ವಿ ಎಸ್ ಕಾಲೇಜಿನ ಆಂಗ್ಲ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಟಿ.ಕೆ.ರವೀಂದ್ರನ್ ಪುನರಾಯ್ಕೆಗೊಂಡಿದ್ದಾರೆ. ಮಂಗಳೂರಿನ ರೋಸಾರಿಯೋ ಪದವಿ ಕಾಲೇಜ್ ನಲ್ಲಿ ಈಚೆಗೆ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಮಂಗಳೂರು ಬೆಸೆಂಟ್ ಮಹಿಳಾ ಕಾಲೇಜಿನ ಆಂಗ್ಲ ವಿಭಾಗದ ಸಹಪ್ರಾಧ್ಯಾಪಕಿ ಮೀರಾ ವಿಡ್ನ ಕೊಯೊಲೋ ಉಪಾಧ್ಯಕ್ಷರಾಗಿ, ವಿಟ್ಲ ಸರಕಾರಿ ಪದವಿ ಕಾಲೇಜಿನ ಆಂಗ್ಲವಿಭಾಗದ ಸಹಪ್ರಾಧ್ಯಾಪಕರಾದ ಡಾ.ಶ್ರೀಜ ಕಾರ್ಯದರ್ಶಿಯಾಗಿ, ಬಂಟ್ವಾಳ ಎಸ್ ವಿ ಎಸ್ ಕಾಲೇಜಿನ ಆಂಗ್ಲ ವಿಭಾಗದ ಸಹಪ್ರಾಧ್ಯಾಪಕಿಯಾದ ಶಾಂತಿರೋಶ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...