Tuesday, February 11, 2025

ತಾಲೂಕಿನ 17 ಸರಕಾರಿ ಶಾಲೆಗಳನ್ನು ಅಂಗ್ಲ ಮಾಧ್ಯಮ ಶಿಕ್ಷಣ ಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ: ಬಿ.ಒ.ಎನ್. ಶಿವಪ್ರಕಾಶ್

ಬಂಟ್ವಾಳ: ಪ್ರಸತ್ತ ಶೈಕ್ಷಣಿಕ ವರ್ಷದಿಂದ ಒಂದು ಸಾವಿರ ಸರಕಾರಿ ಶಾಲೆಗಳಲ್ಲಿ ಅಂಗ್ಲ ಮಾಧ್ಯಮ ಶಿಕ್ಷಣದಲ್ಲಿ ಭೋದನೆಗೆ ಸರಕಾರ ಅವಕಾಶ ನೀಡಲಿದ್ದು , ಬಂಟ್ವಾಳ ತಾಲೂಕಿನ ಸುಮಾರು 17 ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಅಂಗ್ಲ ಮಾಧ್ಯಮ ಶಿಕ್ಷಣ ದ ಅವಕಾಶ ನೀಡುವಂತೆ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶಿವಪ್ರಕಾಶ್ ತಿಳಿಸಿದ್ದಾರೆ.

ಸರಕಾರಿ ಶಾಲೆಗಳ ಉಳಿವಿಗಾಗಿ ಅನೇಕ ಕಸರತ್ತುಗಳನ್ನು ಮಾಡಿದ ಸರಕಾರ ಕೊನೆಗೂ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳಿಗಲ್ಲಿ ಶಿಕ್ಷಣ ನೀಡುವ ಅವಕಾಶ ಈ ಬಾರಿಯಿಂದ ನೀಡಿದೆ.
ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಅಂಗ್ಲಮಾಧ್ಯಮ ಶಾಲೆಯಾಗಿ ಪರಿವರ್ತನೆಗೆ ಸರಕಾರ ಅಸ್ತು ಎಂದಿದೆ.
ಈಗಾಗಲೇ ರಾಜ್ಯದ ಒಂದು ಸಾವಿರ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಅಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಅವಕಾಶ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಹಲವಾರು ವರ್ಷಗಳಿಂದ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗಾಗಿ ಬಂಟ್ವಾಳ ದ ಹಲವು ಶಾಲೆಗಳು ಹೋರಾಟಗಳನ್ನು ಮಾಡುತ್ತಾ ಬಂದಿದೆ.
ಜೊತೆಗೆ ಸರಕಾರಿ ಶಾಲೆಗಳನ್ನು ಉಳಿಸಲು ಸಂಘಸಂಸ್ಥೆಗಳು ಹಾಗೂ ಹಳೆ ವಿದ್ಯಾರ್ಥಿ ಗಳು ಸಾಕಷ್ಟು ಪ್ರಯತ್ನ ಮಾಡುತ್ತಿದ್ದರು.
ಜೊತೆಗೆ ಕೆಲ ಶಾಲೆಗಳಲ್ಲಿ ಎಲ್.ಕೆ.ಜಿ.ಯು.ಕೆ.ಜಿ.ಮಾದರಿಯ ಶಿಕ್ಷಣ ವನ್ನು ನೀಡುತ್ತಿದ್ದರು.
ಅಂತಹ ಶಾಲೆಗಳಲ್ಲಿ
ಗೆಸ್ಟ್ ಟೀಚರ್ ಗಳ ನ್ನು ನೇಮಕ ಮಾಡಿ ಅವರಿಗೆ ಶಾಲಾಭಿವೃದ್ದಿ ಸಮಿತಿ ಯ ಅಧ್ಯಕ್ಷ ಸದಸ್ಯರು ಗಳು ಸ್ವತಃ ಕೈಯಿಂದ ಸಂಬಳ ನೀಡಿ ಶಾಲೆಯ ಉಳಿವಿಗಾಗಿ ಪ್ರಯತ್ನ ಮಾಡುತ್ತಿದ್ದರು.
ಇವರ ಈ ಎಲ್ಲಾ ಪ್ರಯತ್ನ ದ ಫಲವಾಗಿ ಸರಕಾರ ಈ ಬಾರಿ ಒಂದು ಸಾವಿರ ಶಾಲೆಗಳಿಗೆ ಅಂಗ್ಲ ಮಾಧ್ಯಮ ಶಿಕ್ಷಣ ಕ್ಕೆ ಅವಕಾಶ ನೀಡಿದೆ.‌
ಬಂಟ್ವಾಳ ತಾಲ್ಲೂಕಿನಲ್ಲಿ ಒಟ್ಟು ಸರಕಾರಿ ಪ್ರಾಥಮಿಕ 195 , ಮತ್ತು 37 ಹೈಸ್ಕೂಲ್ ಗಳಿವೆ.

ತಾಲೂಕಿನ ಸುಮಾರು 17 ಶಾಲೆ ಗಳನ್ನು ಅಂಗ್ಲ ಮಾಧ್ಯಮ ಶಿಕ್ಷಣ ದ ಅವಕಾಶ ಕ್ಕಾಗಿ ಆಯ್ಕೆ ಮಾಡಿ ಸರಕಾರಕ್ಕೆ ಕಳುಹಿಸಲಾಗಿದೆ.
224 ವಿಧಾನ ಸಭಾ ಕ್ಷೇತ್ರದ ಲ್ಲಿ ಪ್ರತಿ ವಿಧಾನ ಸಭಾ ಕ್ಷೇತ್ರ ಕ್ಕೆ ನಾಲ್ಕು ಶಾಲೆಗಳಿಗೆ ಮಾತ್ರ ಈ ಬಾರಿ ಅವಕಾಶ ನೀಡಲಾಗುತ್ತದೆ ಎಂದು ಹೇಳಲಾಗುತ್ತದೆ. ಮೂಲಭೂತ ಸೌಕರ್ಯಗಳ ಇರುವ ಶಾಲೆಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ.

ಪಾಠ ಮಾಡಲು ಅಂಗ್ಲಮಾಧ್ಯಮದಲ್ಲಿ ಸಮರ್ಥ ಶಿಕ್ಷಕ ರಿರಬೇಕು. 1 ರಿಂದ ಪಿಯುಸಿ ಅಥವಾ ಹತ್ತನೇ ತರಗತಿ ಕ್ಲಾಸುಗಳಿರುವ ಕಡೆಗಳಿಗೆ ಹೆಚ್ಚು ಅವಕಾಶ ನೀಡಲಾಗುತ್ತದೆ.‌ ಸರಕಾರ ಒಂದು ವಾರದೊಳಗೆ ಈ ಅದೇಶ ಇಲಾಖೆ ಗೆ ನೀಡಬಹುದು.
ಅಂಗ್ಲ ಮಾಧ್ಯಮ ಶಿಕ್ಷಣ ನೀಡುವ ಶಾಲೆಯ ಟೀಚರ್ಸ್ ಗಳಿಗೆ ಇಲಾಖೆ ಟ್ರೈನಿಂಗ್ ನೀಡುತ್ತದೆ.
ಇದೊಂದು ಉತ್ತಮ ಯೋಜನೆ ಮತ್ತು ಯೋಚನೆ ಯಾಗಿದ್ದು ಸರಕಾರಿ ಶಾಲೆಗಳ ಉನ್ನತೀಕರಣಕ್ಕೆ ಇದು ಮೊದಲ ಹೆಜ್ಜೆ ಯಾಗಿದೆ.
ಮುಂದಿನ ಬಾರಿ ಇನ್ನು ಹೆಚ್ಚು ಶಾಲೆಗಳಿಗೆ ಅವಕಾಶ ಸಿಗಬಹುದು ಎಂದು ಅವರು ತಿಳಿಸಿದ್ದಾರೆ. ಕನ್ನಡ ಕ್ಕೆ ಹೆಚ್ಚು ಒತ್ತು ನೀಡಿ ಶಿಕ್ಷಣ ನೀಡಲಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶಿವಪ್ರಕಾಶ್ ತಿಳಿಸಿದ್ದಾರೆ.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...