Wednesday, February 4, 2026

ಬ್ಲ್ಯಾಕ್ ಬೆಲ್ಟ್ ತಂಡಕ್ಕೆ ಡಿ.ಕೆ. ಟ್ರೋಫಿ 2020

ಬಂಟ್ವಾಳ: ಇರಾ ಡಿಫರೆಂಟ್ ಕ್ರಿಕೆಟರ್ಸ್ ಕುರಿಯಾಡಿ ಇದರ ವತಿಯಿಂದ ಕುರಿಯಾಡಿ ಕ್ರೀಡಾಂಗಣದಲ್ಲಿ 3 ದಿನಗಳಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಬ್ಲ್ಯಾಕ್ ಬೆಲ್ಟ್ ಕುರಿಯಾಡಿ ತಂಡವು ಚಾಂಪಿಯನ್ಸ್ ತಂಡವಾಗಿ ಹೊರಹೊಮ್ಮಿ ಪ್ರಥಮ ಟ್ರೋಫಿ ಹಾಗೂ 25 ಸಾವಿರ ನಗದನ್ನು ಪಡೆದುಕೊಂಡು, ಫ್ರೆಂಡ್ಸ್ ಮುಡಿಪುನ್ನಾರ್ ಕ್ರಿಕೆಟರ್ಸ್ ಮುಡಿಪು ತಂಡವು ರನ್ನರ್ಸ್ ಆಪ್ ಪ್ರಶಸ್ತಿ 15 ಸಾವಿರ ನಗದು ಹಾಗೂ ಟ್ರೋಫಿಯನ್ನು ಪಡೆಯಲು ಯಶಸ್ವಿಯಾಯಿತು.

ಬ್ಲ್ಯಾಕ್ ಬೆಲ್ಟ್ ತಂಡದ ನಿಝಾಮ್ ಮತ್ತು ಹಾರೀಸ್ ಉತ್ತಮ ದಾಂಡಿಗ, ದಾಳಿಗಾರ, ಹಾಗೂ ಮುಡಿಪುನ್ನಾರ್ ತಂಡದ ಪ್ರಜ್ವಲ್ ಸರ್ವಾಂಗೀಣ ಆಟಗಾರರಾಗಿ ಪ್ರಶಸ್ತಿ ಪುರಸ್ಕೃತ ಗೊಂಡರು. ಹಿರಿಯ ಮುಂಬೈ ಉದ್ಯಮಿಗಳಾದ ಸದಾಶಿವ ಶೆಟ್ಟಿ ಕುರಿಯಾಡಿ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಬಹುಮಾನ ವಿವರಿಸಿದರು. ರಾಖೇಶ್ ರೈ ಕಲ್ಲಾಡಿ, ಮೊಯಿದಿಕುಂಞಿ ಕುರಿಯಾಡಿ, ಹೈದರ್ ಇರಾ, ಹನೀಫ್ ಕುರಿಯಾಡಿ, ಅಭಿಷೇಕ್ ಪಕ್ಕಳ, ರಹಿಮಾನ್ ಕುರಿಯಾಡಿ, ಇಕ್ಬಾಲ್ ಇರಾಸೈಟ್, ಸಿದ್ದೀಕ್ ಕುರಿಯಾಡಿ ಇನ್ನಿತರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

More from the blog

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ...

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...

ಕಟೀಲು 7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.04ರ ಸೇವೆಯಾಟಗಳ ವಿವರ : ದೀಪಕ್ ಶೆಟ್ಟಿ, ಬೈಲುತೇಂಜ ಹೌಸ್, ಕಂದಾವರ,...