ಇರಾ: ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಸರಕಾರವು ಬಹಳಷ್ಟು ವೆಚ್ಚವನ್ನು ಮಾಡುತ್ತಿದೆ. ಪೋಷಕರು ಪ್ರತಿಷ್ಠೆ ಬಿಟ್ಟು ಮಕ್ಕಳ ಭವಷ್ಯಕ್ಕಾಗಿ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಸರಕಾರಿ ಶಾಲೆಗಳಿಗೆ ಸೇರಿಸುವಂತಾಗಬೇಕು ಎಂದು ಮಂಗಳೂರು ವಿಧಾನಸಬಾ ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅವರು ಹೇಳಿದರು.
ಬಂಟ್ವಾಳ ತಾಲೂಕು ಇರಾ ಗ್ರಾಮದ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಇರಾ ಬಾಳೆಪುಣಿಯಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಎಂ.ಆರ್.ಪಿ.ಎಲ್ ಸಹಕಾರದಿಂದ ನೂತನವಾಗಿ ನಿರ್ಮಿಸಲಾದ ಮೂರು ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿ.ಪಂ. ಸದಸ್ಯೆ ಮಮತಾ ಡಿ.ಎಸ್.ಗಟ್ಟಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಇ.ಸಿ.ಒ. ಸುಶೀಲ, ಬಾಳೆಪುಣಿ (ಮುದರ್ರಿಸ್ ನ ಅಲ್ ಹಾಜಿ ಮುಹಮ್ಮದಲಿ ಫೈಝಿ, ಮಂಗಳೂರು ನ್ಯಾಯವಾದಿ ಯಶವಂತ ಮರೋಳಿ, ಇರಾ ಗ್ರಾ.ಪಂ. ಸದಸ್ಯರಾದ ಎಂ.ಬಿ.ಉಮ್ಮರ್, ಮೊಯ್ದೀನ್ ಮೂಲೆ, ತಿಬಿಯಾನ್ ಸ್ಕೂಲ್ ನ ಅಧ್ಯಕ್ಷ ಮೊಯ್ದೀನ್ ಹಾಜಿ ಬದಿಮಾಲೆ, ಇರಾ ಬಾಳೆ ಪುಣಿಯ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಅಝೀಝ್ ಬಡದಲ, ಎಸ್ ಡಿ.ಎಂ.ಸಿ. ಅಧ್ಯಕ್ಷ ಹಸೈನಾರ್ ಉಪಸ್ಥಿತರಿದ್ದರು.
ಈ ಸಮಾರಂಭದಲ್ಲಿ ಶಾಲೆಯ ಪೋಷಕರಾಗಿದ್ದ, ಬಿ.ಜೆ.ಎಂ.ಬಾಳೆಪುಣಿ ಗೌರವಾಧ್ಯಕ್ಷ ಕುಂಞಿಹಾಜಿ ಬಾಳೆಪುಣಿ ಅವರನ್ನು ಸನ್ಮಾನಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಸವಿತಾ ಸ್ವಾಗತಿಸಿ, ಸಹಶಿಕ್ಷಕಿ ಅನುಸೂಯ ವಂದಿಸಿದರು. ಶೋಭಿತಾ ಹಾಗೂ ವಿಜಯಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.