Wednesday, February 12, 2025

94 ಸಿ ಹಕ್ಕುಪತ್ರ ಬಡ ಕುಟುಂಬದ ಸ್ವಾಭಿಮಾನದ ಸಂಕೇತ- ಯು.ಟಿ.ಖಾದರ್

ಇರಾ: ಸರಕಾರಿ ಜಮೀನಿನಲ್ಲಿ ಮನೆ ಕಟ್ಟಿ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದ ಗ್ರಾಮಾಂತರ ಪ್ರದೇಶದ ಬಡವರಿಗಾಗಿ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ತಂದ ಕ್ರಾಂತಿಕಾರಿ ಕಾನೂನಿನಿಂದಾಗಿ ಇಂದು ಬಡವರ‌ ಬಾಳಿಗೆ ಹೊಸ ಬೆಳಕಾಗಿ ಸ್ವಾಭಿಮಾನದ ಸಂಕೇತವಾಗಿ ಮಾರ್ಪಟ್ಟಿದೆ ಎಂದು ಮಂಗಳೂರು ಶಾಸಕ ಯು.ಟಿ‌.ಖಾದರ್ ತಿಳಿಸಿದರು.

ಅವರು ಇರಾ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ಇರಾ ಗ್ರಾಮದ 3ನೇ ಹಂತದ 94 ಸಿ ಹಕ್ಕು ಪತ್ರದ ವಿತರಣೆಯನ್ನು ನೆರವೇರಿಸಿದರು. ಸಮಾರಂಭದಲ್ಲಿ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಕುರ್ನಾಡು ಜಿ.ಪಂ. ಸದಸ್ಯೆ ಡಿ.ಎಸ್.ಮಮತ ಗಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಎಂ.ಬಿ. ಉಮ್ಮರ್, ಮೊಯಿದಿ ಕುಂಞಿ, ತುಳಸಿ ಪಿ.ಪೂಜಾರಿ, ಲೆನ್ನಿ ಡಿಸೋಜ, ಪಾರ್ವತಿ, ಸಿಸಿಲಿಯಾ, ವಲಯ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಎಸ್. ಇನ್ನಿತರರು ಉಪಸ್ಥಿತರಿದ್ದರು. ಬಳಿಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಂಗೆ, ಮಾದುಪಳ್ಳ, ಸಂಪಿಲ, ಮೊಂತಿಮಾರುಪಡ್ಪು, ಕುರಿಯಾಡಿ, ಪಂಜಾಜೆ, ರಸ್ತೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಾಸಕರು ಶಿಲಾನ್ಯಾಸ ನೆವೇರಿಸಿದರು. ಗ್ರಾಮದ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಸ್ವಾಗತಿಸಿ, ಗ್ರಾಮಕರಣಿಕ ತೌಫಿಕ್ ಧನ್ಯವಾದ ಸಲ್ಲಿಸಿದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...