ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿದ ರಾಜ್ಯ ಸರಕಾರ.

ಕೊರೊನಾ ಎರಡನೇ ಅಲೆಯ ಸಂಕಷ್ಟ ಸಂದರ್ಭದಲ್ಲಿ ಸರಕಾರದ ಮಹತ್ವದ ಹೆಜ್ಜೆ ಇಟ್ಟಿದ್ದು ಸದ್ಯ ದ್ವಿತೀಯ ಪಿ.ಯು.ಸಿ.ಎಲ್ಲಾ ವಿದ್ಯಾರ್ಥಿಗಳು ಪಾಸ್ ಎಂಬ ಘೋಷಣೆ ಸರಕಾರ ಮಾಡಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ದ ಆಧಾರದ ಲ್ಲಿ ಗ್ರೇಡಿಂ ಗ್ ಮಾಡಲಾಗುವುದು ಎಂದ ಅವರು ಫಲಿತಾಂಶ ಸಮಾಧಾನವಿಲ್ಲದ ವಿಧ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕೊರೊನಾ ಕಡಿಮೆಯಾದ ಬಳಿಕ ಪರೀಕ್ಷೆ ನಡೆಸುವ ಚಿಂತನೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

