Friday, July 4, 2025

5, 8, 9, 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಸಮ್ಮತಿ

ಬೆಂಗಳೂರು: 5, 8, 9, 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ ಬೋರ್ಡ್‌ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಈ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್‌ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಸುತ್ತೋಲೆ ರದ್ದು ಪಡಿಸಿತ್ತು. ಈ ಆದೇಶ ಪ್ರಶ್ನಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ನ್ಯಾ.ಕೆ. ಸೋಮಶೇಖರ್ & ರಾಜೇಶ್ ರೈ ಕೆ ಅವರ ನೇತೃತ್ವದ ಪೀಠ ಆದೇಶ ನೀಡಿದೆ. ರಾಜ್ಯ ಸರ್ಕಾರದ ಸುತ್ತೋಲೆ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಸಂಘಟನೆ ಮೇಲ್ಮನವಿ ಸಲ್ಲಿಸಿದ್ದು, ರೂಪ್ಸಾ ಕಾನೂನು ಸಮರಕ್ಕೆ ಹಿನ್ನಡೆಯಾಗಿದೆ.

5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ಹೈಕೋರ್ಟ್‌ ಏಕಸದಸ್ಯ ಪೀಠ ರದ್ದುಪಡಿಸಿತ್ತು. ಹೈಕೋರ್ಟ್‌ ಏಕಸದಸ್ಯ ಪೀಠದ ತೀರ್ಪು ರದ್ದುಪಡಿಸಿರುವ ವಿಭಾಗೀಯ ಪೀಠ ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸಲು ಅವಕಾಶ ನೀಡಿದೆ. ಇನ್ಮುಂದೆ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರ ಬೋರ್ಡ್‌ ಪರೀಕ್ಷೆ ನಡೆಸಲಿದೆ.

ಹೈಕೋರ್ಟ್ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿದ್ದರಿಂದ ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇದೀಗ ಸ್ಥಗಿತಗೊಂಡ ಪ್ರಕ್ರಿಯೆ ಹಂತದಿಂದಲೇ ಮುಂದುವರಿಸಲು ಆದೇಶ ನೀಡಲಾಗಿದೆ. ಅಲ್ಲದೇ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚಸಿದೆ.

More from the blog

ರಸ್ತೆ ಅಭಿವೃದ್ಧಿ ಕಾಮಗಾರಿ – ಜಾಗ ಕಳೆದುಕೊಂಡವರಿಗೆ ಬೆಳ್ತಂಗಡಿಯಲ್ಲಿ ದಾಖಲೆ ಸಂಗ್ರಹ ಶಾಖೆ ಆರಂಭ.. 

ಬೆಳ್ತಂಗಡಿ : ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕದ ರಸ್ತೆಯ ಅಭಿವೃದ್ಧಿ ಕಾಮಗಾರಿ ವೇಳೆ ಬಹುತೇಕ ಸ್ಥಳೀಯರು ಜಾಗ ಕಳೆದುಕೊಂಡಿದ್ದರು. ಇದೀಗ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಅವರ ಮುತುವರ್ಜಿಯಲ್ಲಿ ರಾಷ್ಟ್ರೀಯ...

ಮಧ್ವ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗಿಡ ನಾಟಿ ಹಾಗೂ ಪರಿಸರ ಜಾಗ್ರತಿ ಮಾಹಿತಿ ಕಾರ್ಯಕ್ರಮ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ) ಬಂಟ್ವಾಳ ಇದರ,ವಗ್ಗ ವಲಯದ ಮಧ್ವ ಒಕ್ಕೂಟದ ವತಿಯಿಂದ ದ ಕ ಜಿ ಪಂ ಹಿ ಪ್ರಾಥಮಿಕ ಶಾಲೆ...

ಅಡಿಕೆ ವ್ಯಾಪಾರಿಯಿಂದ ವಂಚನೆ ಪ್ರಕರಣ : ನ್ಯಾಯಕ್ಕಾಗಿ ಡಿವೈಎಸ್ಪಿ ಗೆ ಮನವಿ..

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ‌ರೂಪಾಯಿ ವಂಚಿಸಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಅಶೋಕ್ ಶೆಟ್ಟಿ ಸರಪಾಡಿ ನೇತೃತ್ವದಲ್ಲಿ ರೈತರು ನ್ಯಾಯಕ್ಕಾಗಿ ದ.ಕ.ಜಿಲ್ಲಾಧಿಕಾರಿಗಳು, ಎಸ್ಪಿಯವರು ಹಾಗೂ ಬಂಟ್ವಾಳ ನಗರ ಇನ್ಸ್‌ಪೆಕ್ಟರ್ ಅವರ ಮೂಲಕ...

ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರ: ಕ್ಷಯರೋಗಿಗಳಿಗೆ ಆಹಾರ ಕಿಟ್ ವಿತರಣೆ

ಬಂಟ್ವಾಳ : ತಾಲೂಕಿನ ಇರ್ವತ್ತೂರು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಂಟು ಗ್ರಾಮಗಳ ವ್ಯಾಪ್ತಿಯ ಕ್ಷಯರೋಗಿಗಳಿಗೆ ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನ ಯೋಜನೆಯಡಿ ಪೌಷ್ಠಿಕಾಂಶವುಳ್ಳ ಆಹಾರದ ಕಿಟ್ ವಿತರಣಾ...