Saturday, July 12, 2025

ದೆಹಲಿಗೆ ತೆರಳಿದ್ದ ಉಪ್ಪಿನಂಗಡಿ ನಿವಾಸಿಗೆ ಕೊರೊನಾ ಪಾಸಿಟಿವ್

ಉಪ್ಪಿನಂಗಡಿ: ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ನಿವಾಸಿಗೆ ಪಾಸಿಟಿವ್ ರಿಪೋರ್ಟ್ ಬಂದಿದೆ.

ಈತ ವೈಯಕ್ತಿಕ ಕೆಲಸದ ಹಿನ್ನೆಲೆ ದೆಹಲಿಗೆ ತೆರಳಿದ್ದ ಬಗ್ಗೆ ‌ಮಾಹಿತಿಿ ಲಭ್ಯವಾಗಿತ್ತು.
ಅ ಬಳಿಕ ಮಾ.21ರಂದು ನಿಜಾಮುದ್ದೀನ್ ರೈಲಿನಲ್ಲಿ ಮಂಗಳೂರಿಗೆ ಆಗಮನ ಮಾಡಿದ್ದ.

ಫೋನ್ ಟವರ್ ಲೊಕೇಶನ್ ಆಧಾರದಲ್ಲಿ ವ್ಯಕ್ತಿಯನ್ನು ಪತ್ತೆ ಮಾಡಿದ್ದ ಜಿಲ್ಲಾಡಳಿತ ಈ
ವ್ಯಕ್ತಿಯನ್ನ ಕ್ವಾರಂಟೈನ್ ಮಾಡಿ ಗಂಟಲ ದ್ರಾವಣ ಪರೀಕ್ಷೆಗೆ ಕಳುಹಿಸಲಾಗಿತ್ತು.

ಇದೀಗ ಬಂದ ವರದಿಯಲ್ಲಿ ಯುವಕನಿಗೆ ಕೊರೋನಾ ಪಾಸಿಟಿವ್ ಎಂದು ಸಾಬೀತು ಅಗಿದೆ. ಎ.1ರಿಂದಲೇ ಮಂಗಳೂರಿನಲ್ಲಿ ಕ್ವಾರೆಂಟೈನ್ ನಲ್ಲಿರುವ ವ್ಯಕ್ತಿಯನ್ನು ಇರಿಸಲಾಗಿತ್ತು. ಮಾ.20ರಂದು ನಿಜಾಮುದ್ದೀನ್ ರೈಲಿನಲ್ಲಿ ಬಂದು ಮಾ.21ರಂದು ಮಂಗಳೂರಿಗೆ ಆಗಮನ ಮಾಡಿದ್ದ.

ನಿಝಾಮುದ್ದೀನ್ ಏರಿಯಾದ ಟವರ್ ಲೊಕೇಶನ್ ಆಧಾರದಲ್ಲಿ ಈ ವ್ಯಕ್ತಿ ಸೇರಿ 26 ಜನರನ್ನು ಮಂಗಳೂರಿನಲ್ಲಿ
ಕ್ವಾರಂಟೈನ್ ಮಾಡಲಾಗಿತ್ತು.

ತಬ್ಲೀಕ್ ಮಸೀದಿ ತೆರಳಿದ ಮತ್ತು ಆ ಪ್ರದೇಶದಲ್ಲಿ ಸುತ್ತಾಡಿದ ಜಿಲ್ಲೆಯ 26 ಮಂದಿ ಕ್ವಾರಂಟೈನ್ ಮಾಡಲಾಗಿತ್ತು

ಈತನ ಜೊತೆ ತೆರಳಿದ್ದ ತುಂಬೆ ಗ್ರಾಮದ ವ್ಯಕ್ತಿಗೆ ಎ.4ರಂದೇ ಕೊರೋನ ಪಾಸಿಟಿವ್ ಆಗಿತ್ತು.
ಆದರೆ ಈತನಿಗೆ ಮಾತ್ರ ಇಂದು ಪಾಸಿಟಿವ್ ರಿಪೋರ್ಟ್ ಬಂದಿದೆ.
ಸುಳ್ಳು ಸುದ್ದಿ
ಉಪ್ಪಿನಂಗಡಿ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಸೀಲ್ ಡೌನ್ ಎಂಬ ಸಂದೇಶಗಳನ್ನು ವ್ಯಾಟ್ಸಪ್ ಮೂಲಕ ಕಳುಹಿಸಲಾಗುತ್ತಿದ್ದು ಇದೊಂದು ಸುಳ್ಳು ಸುದ್ದಿ ಯಾಗಿದೆ.
ಈವರಗೆ ಜಿಲ್ಲಾಡಳಿತ ಯಾವುದೇ ಅದೇಶ ಮಾಡಿಲ್ಲ.
ಜಿಲ್ಲಾಡಳಿತ ದ ಅಧಿಕೃತವಾದ ಆದೇಶ ಬರುವವರೆಗೂ ಯಾರು ತಲೆಕೆಡಿಸಿಕೊಳ್ಳಬೇಕಾಗಿಲ್ಲ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...