Monday, January 26, 2026

ಬೀಳ್ಕೊಡುಗೆ ಕಾರ್ಯಕ್ರಮ

ಬಂಟ್ವಾಳ: ಇಲಾಖೆಯಲ್ಲಿ ಯಾವುದೇ ಕಪ್ಪು ಚುಕ್ಕೆಯಿಲ್ಲದೆ ಕೆಲಸ ಮಾಡುವುದು ನಿಜವಾದ ಸಾಧನೆ, ಇಂತವರ ಸಾಲಿನಲ್ಲಿ ನಿವೃತ್ತಿ ಹೊಂದಿದ ವಿಶ್ವನಾಥ ರೈ ಇರುವುದು ಸಂತೋಷದ ವಿಚಾರ ಎಂದು ಬಂಟ್ವಾಳ ಡಿ.ವೈ.ಎಸ್.ಪಿ. ವೆಲೆಂಟೈನ್ ಡಿ.ಸೋಜ ಹೇಳಿದರು.
ಅವರು ಕಳೆದ 27 ವರ್ಷಗಳಿಂದ ಜಿಲ್ಲೆಯ ವಿವಿಧ ಪೋಲೀಸ್ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸಿ ನಿವೃತ್ತಿ ಹೊಂದಿದ ಪ್ರಸ್ತುತ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಎ.ಎಸ್.ಐ. ಅಗಿದ್ದ ವಿಶ್ವನಾಥ ರೈ ಮತ್ತು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಿಂದ ಎಸ್.ಐ. ಅಗಿ ಪದೋನ್ನತಿ ಹೊಂದಿ ನಗರ ಠಾಣೆಗೆ ವರ್ಗಾವಣೆಗೊಂಡಿರುವ ಕಲೈಮಾರ್ ಹಾಗೂ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಿಂದ ಪುತ್ತೂರು ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿರುವ ಹೆಡ್ ಕಾನ್ಸ್ಟೇಬಲ್ ವರ್ಗೀಸ್ ಅವರ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಶ್ವನಾಥ ರೈ ಅವರು ಇಲಾಖೆಯ ಯಾವುದೇ ಕೆಲಸ ನೀಡಿದರೂ ನಿಷ್ಠೆಯಿಂದ ಮಾಡಿದ್ದಾರೆ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಯಾವುದೇ ಕೆಲಸ ಮಾಡುವಾಗ ಪ್ರಮಾಣಿಕತೆಯಿಂದ ನಿಷ್ಠೆಯಿಂದ ಮಾಡಿ ಎಂದು ಅವರು ಹೇಳಿದರು.
 
ಬೀಳ್ಕೊಡುಗೆ ಕಾರ್ಯಕ್ರಮದ ಸಂಘಟಕ ಬಂಟ್ವಾಳ ಗ್ರಾಮಾಂತರ ಎಸ್.ಐ. ಪ್ರಸನ್ನ ಅವರು ಮಾತನಾಡಿ, ಹಿರಿಯರ ಮಾರ್ಗದರ್ಶನದಲ್ಲಿ ಕಿರಿಯರು ಕೆಲಸ ಮಾಡಿ, ಇಲಾಖೆಯ ಪ್ರತಿಯೊಂದು ಕೆಲಸಗಳನ್ನು ಪ್ರೀತಿಯಿಂದ ಜೊತೆಯಾಗಿ ಮಾಡಿದರೆ ಯಶಸ್ಸು ಸಾಧ್ಯ ಎಂದು ಹೇಳಿದರು.
ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ. ಅವಿನಾಶ್ ಹಾಗೂ ವಿಟ್ಲ ಎಸ್.ಐ. ವಿನೋದ್ ರೆಡ್ಡಿ ಮುಖ್ಯ ಅತಿಥಿಯಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರೋ. ಎಸ್.ಐ. ನಸ್ರೀನಾತಾಜ್, ಹಿರಿಯವರ ಅನುಭವ ಕಿರಿಯರಿಗೆ ಸದಾ ಸ್ಪೂರ್ತಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಠಾಣಾ ಅಪರಾಧ ವಿಭಾಗದ ಎಸ್.ಐ. ಸಂಜೀವ ಹಾಗೂ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸಿಬ್ಬಂದಿ ವಿವೇಕ್ ಕಾರ್ಯಕ್ರಮ ನಿರೂಪಿಸಿದರು.

More from the blog

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...