Friday, February 14, 2025

ದ.ಕ.ಜಿಲ್ಲೆಯಲ್ಲಿ ಕಾಂಗ್ರೇಸ್ ಅಲೆ ಮಿಥುನ್ ಪರ ಒಲವು: ಉಮ್ಮರ್ ಫಾರೂಕ್ ಪರಂಗಿಪೇಟೆ

ಬಂಟ್ವಾಳ: ಕಾಂಗ್ರೇಸ್ ಅಭ್ಯರ್ಥಿ ಮಿಥುನ್ ರೈ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸುತ್ತಾರೆ ಎಂದು ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ
ಮಾಜಿ ಜಿ.ಪಂ.ಸದಸ್ಯ ಉಮ್ಮರ್ ಫಾರೂಕ್ ಹೇಳಿದ್ದಾರೆ.
ಅವರು ಪರಂಗಿಪೇಟೆ ವಾರ್ಡ್‌ ಗಳಲ್ಲಿ ಮತಯಾಚನೆ ನಡೆಸಿದ ಬಳಿಕ ಮಾಧ್ಯಮ ವರ ಜೊತೆ ಮಾತನಾಡಿದರು.


ಪರಂಗಿಪೇಟೆ ಯ ಪ್ರತಿ ಮನೆಮನೆಗಳಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಪ್ರತಿಯೊಬ್ಬ ಮತದಾರರು ಉತ್ತಮ ಪ್ರತಿಕ್ರಿಯೆ ನೀಡಿದ್ದು ಈ ಬಾರಿ ದ.ಕ.ಜಿಲ್ಲೆಯ ರಾಜಕೀಯ ಬದಲಾವಣೆ ನಿಶ್ಚಿತ ಎಂದು ಅವರು ಹೇಳಿದ್ದಾರೆ.
ಕಳೆದ ಹತ್ತು ವರ್ಷಗಳಲ್ಲಿ ನಳಿನ್ ಕುಮಾರ್ ಕಟೀಲು ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ, ಯಾವುದೇ ಕೆಲಸ ಮಾಡದ ನಳಿನ್ ಕುಮಾರ್ ಅವರು ಮೋದಿಯವರ ಹೆಸರಿನಲ್ಲಿ ಮತಯಾಚನೆ ನಡೆಸುತ್ತಿದ್ದಾರೆ.
ಹಾಗಾಗಿ ಈ ಬಾರಿ ಜನ ಬದಲಾವಣೆ ಬಯಸಿದ್ದಾರೆ, ಬದಲಾವಣೆ ನಿಶ್ಚಿತ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
ಪ್ರಮುಖರಾದ ಹಾಶೀರ್ ಪೆರಿಮಾರ್, ರಮ್ಲಾನ್ ಮಾರಿಪಳ್ಳ, ಆಶೀಕ್ ಇಕ್ಬಾಲ್, ಇಕ್ಬಾಲ್ ಸುಜೀರ್ , ಅಬ್ದುಲ್ ಸಮಾದ್ , ರಫೀಕ್ ಪೆರಿಮಾರ್ ಇಂಮ್ತಿಯಾಜ್ ತುಂಬೆ, ಮಜೀದ್ ಪೆರಿಮಾರ್, ಗಫೂರ್ ದುಬೈ, ರಿಯಾಜ್ ಕುಂಪಣಮಜಲು, ಲಿಡಿಯಾ ಪಿಂಟೋ, ಲಕ್ಮೀ, ಹೇಮಲತಾ, ಸುಜಾತ, ಮಹಮ್ಮದ್ ಮೋನು, ಜಾಹೀರ್, ಹುಸೈನ್ ಅಮ್ಮೆಮಾರ್, ಬಶೀರ್ ಅಮ್ಮೆಮಾರ್, ತೌಫೀಕ್ , ಸೌಕತ್ ಪಾಡಿ, ಮಹಮ್ಮದ್ ಎಂ.ಕೆ, ಇಸಾಮ್ ಪರಂಗಿಪೇಟೆ, ತೌಪೀಕ್ ಬಂದರ್,
ಸಲಾಂ ಮಲ್ಲಿ ಮತ್ತಿತರರು ಉಪಸ್ಥಿತರಿದ್ದರು.

More from the blog

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

  ಬೆಂಗಳೂರು:    ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ...

ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶ: ಬಂಟ್ವಾಳ ತಾಲೂಕು ಸಮಿತಿ ಪ್ರಮುಖರ ಸಭೆ

  ಬಂಟ್ವಾಳ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಉಚ್ಚಂಗೀ ಸಹಿತ ಕಾಪು ಸಾವಿರ ಸೀಮೆಯ ಒಡತಿ ಶ್ರೀ ಮಾರಿಯಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನಿಂದ ಹೊರೆಕಾಣಿಕೆ ಸಮರ್ಪಣೆ ಹಾಗೂ ಆಮಂತ್ರಣ ಪತ್ರಿಕೆ...

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕದ ವಾರ್ಷಿಕೋತ್ಸವ

ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ ಇದರ ವಾರ್ಷಿಕೋತ್ಸವ ಹಾಗೂ ಮಹಾಸಭೆಯು ಶಾರದಾ ಸಭಾಭವನ ರಾಮಲ್ಕಟ್ಟೆ ತುಂಬೆಯಲ್ಲಿ ನಡೆಯಿತು. ಪುರ್ವಾನ್ಹ ವಾರ್ಷಿಕೋತ್ಸವವನ್ನು ಸಂಘದ ಅಧ್ಯಕ್ಷರಾದ ಶಿವಕುಮಾರ್ ಉದ್ಘಾಟಿಸಿದರು. ಅಪರಾನ್ಹ 3 ಘಂಟೆಗೆ...

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...