Monday, January 26, 2026

ಸೌಹಾರ್ದ ಮೆರೆದ  ಮೀನು  ಮಾರಾಟಗಾರರು

ಬಂಟ್ವಾಳ: ಫರಂಗಿಪೇಟೆಯ ಸೇವಾಂಜಲಿ ವತಿಯಿಂದ ನಡೆದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಲ್ಲಿನ ಮುಂಭಾಗದ ಮೀನು ಮಾರುಕಟ್ಟೆಯನ್ನು ಇಡೀ ದಿನ ಬಂದ್ ಮಾಡುವ ಮೂಲಕ ಮೀನು ಮಾರಾಟಗಾರರು ಸೌಹಾರ್ದ ಮೆರೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯ ಸಮೀಪ ಫರಂಗಿಪೇಟೆಯ ಮೀನು ಮಾರುಕಟ್ಟೆಯ ಇನ್ನೊಂದು ಕಡೆಯಲ್ಲಿ ಸೇವಾಂಜಲಿ ಮಂಟಪವಿದ್ದು, ಇಲ್ಲಿ ಪ್ರತಿ ವರ್ಷ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತದೆ. ಈ ಬಾರಿ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು ಮೀನು ಮಾರುಕಟ್ಟೆಯಲ್ಲಿ ಮಾರಾಟಗಾರರೊಂದಿಗೆ ಇಂದು ಮಧ್ಯಾಹ್ನದವರೆಗೆ ಮಾರುಕಟ್ಟೆ ಬಂದ್ ಮಾಡಿ ಸಹಕರಿಸಬೇಕಾಗಿ ಕೋರಿದ್ದು, ಮಾರುಕಟ್ಟೆಯ ಎಲ್ಲ ಮೀನು ಮಾರಾಟಗಾರರು ಇಡೀ ದಿನ ಮಾರುಕಟ್ಟೆಯನ್ನು ಬಂದ್ ಮಾಡಿ ಸಹಕರಿಸಿದ್ದಾರೆ. ಮೀನು ಮಾರಾಟಗಾರರ ಈ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಗಣೇಶೋತ್ಸವದ ಪ್ರಯುಕ್ತ ಇಂದು ಮಧ್ಯಾಹ್ನದ ವರೆಗೆ ಬಂದ್ ಮಾಡುವಂತೆ ನಾವು ಮೀನು ಮಾರಾಟಗಾರರೊಂದಿಗೆ ವಿನಂತಿಸಿದ್ದು, ಅವರು ಅದಕ್ಕೆ ಕೂಡಲೇ ಸಹಕಾರ ನೀಡಿದ್ದಾರೆ. ಅಲ್ಲದೆ ಅವರು ಇಂದು ಇಡೀ ದಿನ ಬಂದ್ ಮಾಡಿ ಸಹಕರಿಸಿದರು. ಇಲ್ಲಿ ೩೭ ವರ್ಷಗಳಿಂದ ಗಣೇಶೋತ್ಸವ ನಡೆಯುತ್ತಿದ್ದು ಸೌಹಾರ್ದವಾಗಿ ನಡೆಯುತ್ತಿದೆ ಎಂದು ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ, ಫರಂಗಿಪೇಟೆ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಕೃಷ್ಣಕುಮಾರ್ ಪೂಂಜಾ ಅವರು ತಿಳಿಸಿದ್ದಾರೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...