Thursday, February 13, 2025

ಅರಣ್ಯ ಸಂಪತ್ತು ಮತ್ತು ವನ್ಯ ಜೀವಿಗಳನ್ನು ಬೆಂಕಿಯಿಂದ ರಕ್ಷಿಸುವ ಬಗ್ಗೆ ಕಾಡ್ಗಿಚು ಜಾಗೃತಿ ಕಾರ್ಯಾಗಾರ

ಮಂಗಳೂರು ವಿಭಾಗದ ಮಂಗಳೂರು ಉಪ ವಿಭಾಗ ಮಟ್ಟದಲ್ಲಿ ಮುಂಚೂಣಿ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅರಣ್ಯ ಸಂಪತ್ತು ಮತ್ತು ವನ್ಯ ಜೀವಿಗಳನ್ನು ಬೆಂಕಿಯಿಂದ ರಕ್ಷಿಸುವ ಬಗ್ಗೆ ಮಾಹಿತಿ ಕಾರ್ಯಾಗಾರ ರೋಟರಿ ಕ್ಲಬ್ ಬಿ.ಸಿ. ರೋಡ್ ಬಂಟ್ವಾಳ ದಲ್ಲಿ ನಡೆಯಿತು.

ಅಗ್ನಿಶಾಮಕ ಠಾಣಾಧಿಕಾರಿ ಚಂದ್ರಕಾಂತ್ ರವರ ನೇತೃತ್ವದಲ್ಲಿ ಬಂಟ್ವಾಳದ ಅಗ್ನಿಶಾಮಕದಳದವರಿಂದ ಬೆಂಕಿ ನಂದಿಸುವ ಬಗ್ಗೆ ಮಾಹಿತಿಯನ್ನು ಸಿಬ್ಬಂದಿಯವರಿಗೆ ನೀಡಲಾಯಿತು.

ಬಳಿಕ ರೋಟರಿ ಕ್ಲಬ್ ನಲ್ಲಿ ಮಂಗಳೂರು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್.ಪಿ ಇವರ ಅದ್ಯಕ್ಷತೆಯಲ್ಲಿ ಮಾಹಿತಿ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರಕ್ಕೆ ಬೆಳ್ತಂಗಡಿ ವಲಯ, ಬಂಟ್ವಾಳ ವಲಯ, ಮಂಗಳೂರು ವಲಯ, ಉಪವಲಯ ಅರಣ್ಯಾಧಿಕಾರಿ, ಗಸ್ತು ಅರಣ್ಯ ಪಾಲಕರು, ಅರಣ್ಯ ವೀಕ್ಷಕರು ಹಾಜರಿದ್ದರು.

ಕಾರ್ಯಕ್ರಮದಲ್ಲಿ ಬಂಟ್ವಾಳ ರೋಟರಿ ಅಧ್ಯಕ್ಷರಾದ ಪ್ರಕಾಶ್ ಬಾಳಿಗಾ, ರೋ|ರಿತೇಶ್ ಬಾಳಿಗಾ, ಪ್ರಫುಲ್ ಶೆಟ್ಟಿ.ಪಿ, ವಲಯ ಅರಣ್ಯಾಧಿಕಾರಿ ಬಂಟ್ವಾಳ, ರಾಜೇಶ್ ಬಳಿಗಾರ್ ವಲಯ ಅರಣ್ಯಾಧಿಕಾರಿ ಮಂಗಳೂರು,  ಮೋಹನ್ ವಲಯ ಅರಣ್ಯಾಧಿಕಾರಿ ಬೆಳ್ತಂಗಡಿ ಹಾಜರಿದ್ದು, ಬೆಂಕಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಕಾಡಿನಲ್ಲಿ ಹರಡುವ ಬೆಂಕಿಯ ಬಗ್ಗೆ ಮತ್ತು ಅದನ್ನು ನಂದಿಸುವ ಬಗ್ಗೆ ಶ್ರೀಧರ್.ಪಿ ಸಿಬ್ಬಂದಿಗಳಿಗೆ ಕಾರ್ಯಾಗಾರ ನಡೆಸಿಕೊಟ್ಟರು. ಬಳಿಕ ಉರಗ ತಜ್ಞರಾದ ಸ್ನೇಕ್ ಕಿರಣ್ ಸಿಬ್ಬಂದಿಯವರಿಗೆ ಹಾವಿನ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ನಿರೂಪಣೆಯನ್ನು ಯಶೋಧರ.ಬಿ ಉಪ ವಲಯ ಅರಣ್ಯಾಧಿಕಾರಿ ಯವರು ನಡೆಸಿ ಕೊಟ್ಟರು.

 

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...