Wednesday, February 12, 2025

ಸಾರ್ವಜನಿಕರ ಗಮನಕ್ಕೆ…: ವನ್ಯಜೀವಿ ಅಂಗಾಂಗಗಳ ಪದಾರ್ಥ, ಟ್ರೋಫಿಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲು ಅವಕಾಶ

ವನ್ಯಜೀವಿ (ಸಂರಕ್ಷಣೆ-ಅಘೋಷಿತ ವನ್ಯಜೀವಿ/ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಅದ್ಯರ್ಪಿಸಲು ಅವಕಾಶ) ನಿಯಮಗಳು 2024 ರಡಿಯಲ್ಲಿ ನಿಯಮವು ಜಾರಿಯಾದ 90 ದಿನಗಳೊಳಗಾಗಿ ಅಂದರೆ ದಿನಾಂಕ : 11-04-2024 ರ ಒಳಗಾಗಿ ವನ್ಯಜೀವಿ/ವನ್ಯಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು (ಅಂದರೆ : ಹುಲಿ ಉಗುರು, ಹುಲಿ-ಚಿರತೆ-ಜಿಂಕೆ ಚರ್ಮ ಮತ್ತು ಹಲ್ಲು, ಆನೆ ದಂತ, ಜಿಂಕೆ ಕೊಂಬು, ಕಾಡುಕೋಣದ ಕೊಂಬು ಮತ್ತು ಇತರೆ ಯಾವುದೇ ಕಾಡುಪ್ರಾಣಿಯ ಯಾವುದೇ ಅಂಗಾಂಗಗಳು) ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಹೊಂದಿರುವ ಸಾರ್ವಜನಿಕರು ಮಾಲೀಕತ್ವ (ಲೈಸೆನ್ಸ್/ಅನುಮತಿ) ಧೃಡೀಕರಣ ಹೊಂದಿರದೇ ಇದ್ದಲ್ಲಿ ಅರಣ್ಯ ಇಲಾಖೆಗೆ ಆದ್ಯರ್ಪಿಸಲು (ತಲುಪಿಸಲು) ಅವಕಾಶ ಕಲ್ಪಿಸಲಾಗಿದೆ.

ಸದರಿ ವಸ್ತುಗಳನ್ನು ಹೊಂದಿರುವ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (ಪ್ರಾದೇಶಿಕ/ವನ್ಯಜೀವಿ), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು (ಪ್ರಾದೇಶಿಕ/ವನ್ಯಜೀವಿ), ವಲಯ ಅರಣ್ಯಾಧಿಕಾರಿಗಳು (ಪ್ರಾದೇಶಿಕ/ವನ್ಯಜೀವಿ) ಅಥವಾ ಪೊಲೀಸ್ ಠಾಣಾ ಮುಖ್ಯಸ್ಥರುಗಳಲ್ಲಿ ನಿಗದಿತ ನಮೂನೆ-1ನ್ನು ರೂ. 100/- ಛಾಪಾ ಕಾಗದದಲ್ಲಿ ನೋಟರಿ ಮಾಡಿಸಿ ಅಫಿಡವಿಟ್ ಮುಖಾಂತರ ಅದ್ಯರ್ಪಿಸುವಂತೆ ಕೋರಿದೆ. ನಿಗದಿತ ದಿನಾಂಕದ ನಂತರ ಮಾಲಿಕತ್ವ ಪ್ರಮಾಣ ಪತ್ರವಿಲ್ಲದ ಎಲ್ಲಾ ವನ್ಯಜೀವಿ ವಸ್ತುಗಳು/ಟ್ರೋಫಿಗಳನ್ನು ಕಾನೂನು ಬಾಹಿರವೆಂದು ಪರಗಣಿಸಲಾಗುತ್ತದೆ ಮತ್ತು ಅಂತವರ ವಿರುದ್ದ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಲಯ ಅರಣ್ಯಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಲು ತಿಳಿಸಿದೆ.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...