Tuesday, February 11, 2025

ಫಾರೆಸ್ಟ್ ಗಾರ್ಡ್ ಗೆ ದಿಗ್ಬಂಧನ

ಬಂಟ್ವಾಳ : ಗ್ರಾಮ ಪಂಚಾಯತ್‌ನ ಪಿಕಪ್ ವಾಹನವನ್ನು ವಶಪಡಿಸಿಕೊಂಡ ಫಾರೆಸ್ಟ್ ಗಾರ್ಡ್ ರೊಬ್ಬರಿಗೆ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸಾರ್ವಜನಿಕರು ದಿಗ್ಬಂಧನ ಹಾಕಿದ ಘಟನೆ ಶನಿವಾರ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿಯಲ್ಲಿ ಸಂಭವಿಸಿದೆ.
ಅರಣ್ಯ ಪ್ರದೇಶದಲ್ಲಿ ತ್ಯಾಜ್ಯ ಹಾಕುತ್ತಾರೆ ಎಂಬ ನೆಪದಲ್ಲಿ ಜೂ. ೧೪ರಂದು ಚೆನ್ನೈತ್ತೋಡಿ ಗ್ರಾ.ಪಂ.ನ ತ್ಯಾಜ್ಯ ವಿಲೇವಾರಿಯ ಪಿಕಪ್ ವಾಹನವನ್ನು ವೇಣೂರು ಅರಣ್ಯ ವಲಯದ ಫಾರೆಸ್ಟ್ ಗಾರ್ಡ್ ಕೃಷ್ಣ ಜೋಗಿ ವಶಪಡಿಸಿಕೊಂಡು ವೇಣೂರು ಕಚೇರಿಗೆ ಸಾಗಿಸಿದ್ದರು. ಈ ಬಗ್ಗೆ ಪಂ. ಅ. ಅಽಕಾರಿ ಮತ್ತು ಗ್ರಾ.ಪಂ. ಅಧ್ಯಕ್ಷ ಯತೀಶ್ ಶೆಟ್ಟಿ ಅವರು ತಾ.ಪಂ.ಮುಖ್ಯ ಕಾರ್ಯನಿರ್ವಹಣಾಽಕಾರಿ ಮತ್ತು ದ.ಕ.ಜಿ.ಪಂ.ಮುಖ್ಯ ಕಾರ್ಯದರ್ಶಿ ಅವರಿಗೆ ದೂರು ನೀಡಿದ್ದರು.ಇದಕ್ಕೆ ಸ್ಪಂದಿಸಿದ ಅಽಕಾರಿಗಳು ವೇಣೂರು ಫಾರೆಸ್ಟ್ ರೇಂಜರ್ ಅವರಿಗೆ ಪಿಕಪ್ ವಾಹನವನ್ನು ಬಿಟ್ಟುಬಿಡುವಂತೆ ಸೂಚಿಸಿದ್ದರು. ಆದರೆ ಫಾರೆಸ್ಟ್ ರೇಂಜರ್ ಪ್ರಶಾಂತ್ ಪೈ ಅವರು ಹತ್ತು ಸಾವಿರ ರೂ. ದಂಡ ಪಾವತಿಸುವಂತೆ ಗ್ರಾಮ ಪಂಚಾಯತ್‌ಗೆ ತಿಳಿಸಿದ್ದರು. ಆದರೆ ಈ ಬಗ್ಗೆ ಪೊಲೀಸ್ ದೂರು ನೀಡಲು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿತ್ತು ಎಂದು ಗ್ರಾ.ಪಂ. ಅಧ್ಯಕ್ಷ ಯತೀಶ್ ಶೆಟ್ಟಿ ತಿಳಿಸಿದ್ದಾರೆ.
ಶನಿವಾರ ಗಾರ್ಡ್ ಕೃಷ್ಣ ಜೋಗಿ ಅವರು ಪಿಕಪ್ ಚಾಲಕನನ್ನು ಕರೆದು ವಾಹನ ವಶಪಡಿಸಿಕೊಂಡ ಬಗ್ಗೆ ಸಾಕ್ಷಿ ಒದಗಿಸಲು ಚೆನ್ನೈತ್ತೋಡಿಗೆ ಆಗಮಿಸಿದ ಸಂದರ್ಭ ಗ್ರಾ.ಪಂ. ಅಧ್ಯಕ್ಷರ ಸಹಿತ ಗ್ರಾ.ಪಂ. ಸದಸ್ಯರು ಮತ್ತು ಗ್ರಾಮಸ್ಥರು ದಿಗ್ಬಂಧನ ಹಾಕಿ ಗಾರ್ಡ್ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಪಿಕಪ್ ವಾಹನವನ್ನು ವಾಪಾಸ್ ಕೊಡುವಂತೆ ಪಟ್ಟು ಹಿಡಿದರು. ಈ ಬಗ್ಗೆ ಮಾಹಿತಿ ಪಡೆದ ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕಾಗಮಿಸಿ ಪಿಡಿಒ ಮತ್ತಿತರರ ಜತೆ ಮಾತುಕತೆ ನಡೆಸಿ ವಶ ಪಡಿಸಿಕೊಂಡ ಪಿಕಪ್ ವಾಹನವನ್ನು ಬಿಟ್ಟುಕೊಡುವಂತೆ ರೇಂಜರ್‌ಗೆ ಸೂಚಿಸಿದ ಬಳಿಕ ವೇಣೂರಿಗೆ ತೆರಳಿ ಪಿಕಪ್ ವಾಹನವನ್ನು ತರಲಾಗಿದೆ ಎಂದು ಗ್ರಾ.ಪಂ. ಅಧ್ಯಕ್ಷ ಯತೀಶ್ ಶೆಟ್ಟಿ ತಿಳಿಸಿದ್ದಾರೆ.

More from the blog

ಇದು ಸರಕಾರಿ ಜಾಗವೋ,ತಾ.ಪಂ.ನ ಜಾಗನಾ? ಇದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...

ಸಿಲಿಂಡರ್ ಸ್ಫೋಟ : ಓರ್ವನಿಗೆ ಗಾಯ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ನಡೆದಿದೆ. ಸುಭಾಷ್ ನಗರ ನಿವಾಸಿ...

ಬ್ಲಡ್ ಕ್ಯಾನ್ಸರ್ ಗೆ ಪೋಲಿಸ್ ಸಿಬ್ಬಂದಿ ಬಲಿ

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ. ಅವಿವಾಹಿತನಾಗಿದ್ದ ಅಭಿಷೇಕ್...