Friday, January 30, 2026

ಡಾಕ್ಟರ್ ಎಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ : ಪ್ರಕರಣ ದಾಖಲು

ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬುದಾಗಿ ನಂಬಿಸಿ ಮಹಿಳೆ ಒಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಉಡುಪಿಯ ಮಲ್ಲೆ ಮೂಲದ ವಿನಿತಾ ಎಂಬವರು ಕಂಪೆನಿಯಲ್ಲಿ ಬಿಸಿನೆಟಸ್ ಪಾರ್ಟ್ನರ್ ಆಗಿ ಕೆಲಸ ಮಾಡಿಕೊಂಡಿದ್ದು, ಬಿಸಿನೆಸ್ ಮುಂದುವರೆಸುವ ಬಗ್ಗೆ ಇಂಟರ್ನೆಟ್ ಕನೆಕ್ಷನ್ ಮಾಡಿಕೊಂಡಿರುವುದಾಗಿದೆ. 2024 ರ ಜನವರಿಯ 24 ರಂದು ಅಪರಿಚಿತ ವ್ಯಕ್ತಿಯೊಬ್ಬ ತಾನು ಡಾಕ್ಟರ್ ಎಂಬುದಾಗಿ ಪರಿಚಯ ಮಾಡಿಕೊಂಡು ವಾಟ್ಸ್ಯಾಪ್ ಮೂಲಕ ಚಾಟ್ ಮಾಡಿಕೊಂಡಿತ್ತಾನೆ. ನಂತರ ಆತನು ಲಂಡನ್ನಿಂದ ಭಾರತಕ್ಕೆ ಬರುವುದಾಗಿ ಹೇಳಿದ್ದು, ಫೆಬ್ರವರಿ 02ರಂದು ಬೆಳಿಗ್ಗೆ 10:30 ಗಂಟೆಗೆ ವಿನಿತಾ ರವರಿಗೆ ಬೇರೆಯೊಂದು ನಂಬರಿನಿಂದ ಕರೆ ಬಂದಿದ್ದು, ಅವರ ಸ್ನೇಹಿತ ದಿಲ್ಲಿ ಏರ್ಪೋರ್ಟ್ ಅಥಾರಿಟಿಯಿಂದ ಕರೆ ಮಾಡುತ್ತಿದ್ದು, ನಿಮ್ಮ ಫ್ರೆಂಡ್ ನಮ್ಮ ಕಸ್ಟಡಿಯಲ್ಲಿದ್ದು ಇವರನ್ನು ರೆಸ್ಕ್ಯೂ/ರಿಲೀವ್ ಮಾಡಬೇಕಾದರೆ ಪೆನಾಲ್ಟಿ ಕಟ್ಟಬೇಕಾಗಿ ಹೇಳಿದ್ದು, ಭಾರತ ಸರ್ಕಾರದಿಂದ ತಮ್ಮ ಮೇಲೆ ಲೀಗಲ್ ಪ್ರೊಸೀಜರ್ ಆಗಬಹುದೆಂದು ಹೆದರಿ ಹಣವನ್ನು ಕಟ್ಟಿ ಮುಚ್ಚಲು ಹಣ ಪಾವತಿ ಮಾಡಿರುವುದಾಗಿದೆ. ವಿನಿತಾ ರವರು ಫೆಬ್ರವರಿ 16ರಿಂದ ಫೆಬ್ರವರಿ 20 ರವರೆಗೆ ಒಟ್ಟು 4,96,000/- ರೂಪಾಯಿ ಹಣವನ್ನು ಕೆನರಾ ಬ್ಯಾಂಕ್ ಖಾತೆಯ ಮೂಲಕ ಹಾಗೂ ಪೋನ್ಪೇ ಮೂಲಕ ವರ್ಗಾಯಿಸಿರುವುದಾಗಿದೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

More from the blog

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...