Friday, January 30, 2026

ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಊಟದಿಂದ ನಿರ್ಗತಿಕರ ಹೊಟ್ಟೆ ತುಂಬಿಸುತ್ತಿರುವ ಗೋಂವಿದ ಪ್ರಭು

ಬಂಟ್ವಾಳ: ಕೋವಿಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಆಹಾರ ಇಲ್ಲದೆ ಸಂಕಷ್ಟದಲ್ಲಿರುವ ಬಿ.ಸಿ.ರೋಡ್ ಮತ್ತು ಬಂಟ್ವಾಳ ಪರಿಸರದ ವಿವಿಧೆಡೆ ಇರುವ ನಿರ್ಗತಿಕರಿಗೆ ಬಂಟ್ವಾಳ ಪುರಸಭೆಯ ಹಿರಿಯ ಸದಸ್ಯ ಗೋವಿಂದ ಪ್ರಭು ಅವರ ನೇತೃತ್ವದಲ್ಲಿ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ವತಿಯಿಂದ ಊಟ ವಿತರಿಸಿದರು.

ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಸಾದದಂತೆ ಬಿ.ಸಿ.ರೋಡ್, ಕೈಕಂಬ, ಬಂಟ್ವಾಳದ ಪರಿಸರದಲ್ಲಿ ಬಸ್ಸು ನಿಲ್ದಾಣ ಸಹಿತ ವಿವಿಧೆಡೆ ಇರುವ ನಿರ್ಗತಿಕರಿಗೆ ಗೋವಿಂದ ಪ್ರಭು ಅವರು ಮತ್ತು ಅವರ ತಂಡ ವಿತರಿಸಿತು.

ದೇವಸ್ಥಾನದಲ್ಲಿ ಊಟ ತಯಾರಿಸಿ ಗೋವಿಂದ ಪ್ರಭು ಅವರು ತನ್ನ ಕಾರಿನಲ್ಲಿ ತಂದು ಊಟ ವಿತರಿಸುತ್ತಿದ್ದಾರೆ. ಅವರ ಜೊತೆ ಅವರ ಬಳಗ ಕೈ ಜೋಡಿಸಿದೆ.

ಕೊರೋನ ನಿಯಂತ್ರಣಕ್ಕೆ ಕರ್ಫ್ಯೂ ಅನಿವಾರ್ಯ. ಕರ್ಫ್ಯೂ ಸಮಯದಲ್ಲಿ ರಸ್ತೆಬದಿ, ಬಸ್ ನಿಲ್ದಾಣದಲ್ಲಿ ಇರುವ ನಿರ್ಗತಿಕರು ಅನ್ನ ನೀರಿಲ್ಲದೆ ಹಸಿದು ಇರುತ್ತಾರೆ. ಯಾರೂ ಹಸಿದು ಇರದಂತೆ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ತಾನದಿಂದ ಊಟ ತಯಾರಿಸಿ ನಿರ್ಗತಿಕರಿಗೆ ವಿತರಿಸಲಾಗುತ್ತಿದೆ. ದೇವಸ್ಥಾನದ ಪ್ರಸಾದ ಎಂಬ ನೆಲೆಯಲ್ಲಿ ಈ ಕೆಲಸ ಮಾಡಲಾಗುತ್ತಿದೆ ಎಂದು ಗೋವಿಂದ ಪ್ರಭು ಮತ್ತು ಅವರ ತಂಡ ತಮ್ಮ‌ ಕಾರ್ಯದ ಬಗ್ಗೆ ಹೇಳಿದೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...