Sunday, July 13, 2025

ಗಾಂಧಿ ಜಯಂತಿ ಆಚರಣೆ

ಬಂಟ್ವಾಳ :  ದ ಕ ಜಿ ಪಂ ಹಿ ಪ್ರಾ ಶಾಲೆ ಬೋಳಂತೂರು ನರಿಕೊಂಬು, ರೀಚಲ್ ಚಾರಿಟೇಬಲ್ ಟ್ರಸ್ಟ್ (ರಿ) ತೊಕೊಟ್ಟು ಭಟ್ನಗರ ಹಾಗೂ ಲಯನ್ಸ್ ಕ್ಲಬ್ ಪೆರ್ಮನ್ನೂರು ಫೋಕಸ್ (ರಿ) ಇವರ ಜಂಟಿ ಆಶ್ರಯದೊಂದಿಗೆ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು sdmc ಅಧ್ಯಕ್ಷರು  ಮೋಹನ್ ರವರು ವಹಿಸಿದ್ದರು. ಮುಖ್ಯಅತಿಥಿಗಳಾಗಿ ರೀಚಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರು ಹಾಗೂ ತೋಟಗಾರಿಕೆ ಇಲಾಖೆಯ ಸೆಕೆಂಡ್ ಡಿವಿಜನಲ್ ಅಧಿಕಾರಿಯಾದ ಸಿರಿಲ್ ರೊರ್ಬಟ್ ಡಿ ಸೋಜರವರುˌ ಅತಿಥಿಗಳಾಗಿ ಲಯನ್ಸ್ ಕ್ಲಬ್ ಪೆರ್ಮನ್ನೂರು ಫೋಕಸ್ (ರಿ) ಅಧ್ಯಕ್ಷರು ಲಯನ್ ಅರುಣ್ ಮೊಂತೆರೋ ˌ ಲಯನ್ ಆಸ್ಕರ್ ಡಿಸೋಜ. ಲಯನ್ ಗಿರೀಶ್ ಕೊಟ್ಟಾರಿ. ಲಯನ್ ಓಲ್ ವೆಟ್ ಡಿಸೋಜ ಹಾಗೂ ಮಾಜಿ kdp ಸದಸ್ಸರು  ಉಮೇಶ್ ಬೋಳಂತೂರು ರವರು ವೇದಿಯಲ್ಲಿ ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು .

ಷ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭಿಸಲಾಯಿತು.ಮುಖ್ಯ ಶಿಕ್ಷಕಿ ಲೀನಾ ಐರಿನ್ ಗೋವಿಯಸ್ ಎಲ್ಲರನ್ನು ಸ್ವಾಗತಿಸಿದರು. ಸಿರಿಲ್ ರೊಬರ್ಟ್ ಡಿಸೋಜ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಒಂದೆರಡು ಮಾತುಗಳನ್ನಾಡಿ ಶುಭ ಹಾರೈಸಿದರು . ನಂತರ ಗಾಂಧೀಜಿಯವರˌ ಮತ್ತು ಲಾಲ್ ಬಹದ್ದೂರು ಶಾಸ್ತ್ರೀಯವರ ಭಾವಚಿತ್ರಕ್ಕೆ ಹೂ ಹಾಕಿ ಗೌರವಿಸಲಾಯಿತು.

ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ವಾಚನಾಲಯಕ್ಕೆ ಕಪಾಟು ಕೊಡುಗೆಯಾಗಿ ನೀಡಿದರು. ಲಯನ್ ಅರುಣ್ ಮೊಂತೆರೋ ಮಕ್ಕಳಿಗೆ ಶುಭ ಹಾರೈಸಿದರು.  ಉಮೇಶ್ ಬೋಳಂತೂರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷರು  ಮೋಹನ್ ರವರು ಗಾಂಧೀಜಿಯವರ ಅದರ್ಶ ಗುಣಗಳನ್ನು ನಮ್ಮಲ್ಲಿ ಬೆಳೆಸಿಕೊಳ್ಳೋಣ ಎಂದು ತಿಳಿಸಿ ಎಲ್ಲರಿಗೂ ಶುಭ ಹಾರೈಸಿದರು. ಕಾರ್ಯಕ್ರಮದ ಕೊನೆಯಲ್ಲಿ  ಗೀತಾ ಪಿ. ಸಹಶಿಕ್ಷಕಿ ಎಲ್ಲರನ್ನು ಆತ್ಮೀಯವಾಗಿ ವಂದಿಸಿದರು. ಪ್ರೆಸಿಲ್ಲಾ ಎವ್ಲಿನ್ ಡಿಸೋಜ ಸಹಶಿಕ್ಷಕಿ ಕಾರ್ಯಕ್ರಮ ನಿರೂಪಿಸಿದರು. sdmc ಅಂಗನವಾಡಿ ಕಾರ್ಯಕರ್ತೆ ˌ ಸಹಾಯಕಿ . ಹಾಗೂ sdmc ಸರ್ವ ಸದಸ್ಯರು ಹಾಗೂ ಪೋಷಕರು ಆಶಾಕಾರ್ಯಕರ್ತೆ ಸಹಕರಿಸಿದರು.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...