Monday, February 10, 2025

ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಹಾಗೂ ಬಂಟ್ವಾಳ ಕಂದಾಯ ಇಲಾಖಾ ತಂಡ ಕೆಂಪು ಕಲ್ಲು ಕೋರೆಗೆ ದಿಡೀರ್ ದಾಳಿ : ಅಪಾರ ಪ್ರಮಾಣದ ಸೊತ್ತು ವಶಕ್ಕೆ

*ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಹಾಗೂ ಬಂಟ್ವಾಳ ಕಂದಾಯ ಇಲಾಖಾ ತಂಡ ಕೆಂಪು ಕಲ್ಲು ಕೋರೆಗೆ ದಿಡೀರ್: ದಾಳಿ ಅಪಾರ ಪ್ರಮಾಣದ ಸೊತ್ತು ವಶಕ್ಕೆ*


ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ
ಪಾದೆ ಕಲ್ಲು ಎಂಬಲ್ಲಿ
ಕಾನೂನು ಉಲ್ಲಂಘಿಸಿ ನಡೆಸಲಾಗುತ್ತಿದ್ದ ಕೆಂಪುಕಲ್ಲಿನ ಮೂರು ಕೋರೆಗಳಿಗೆ ಏಕಕಾಲದಲ್ಲಿ ಇಂದು ಮಂಗಳವಾರ ದಿಢೀರ್ ದಾಳಿ ಕಾರ್ಯಾಚರಣೆ ನಡೆದಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ
ಉಪ ನಿರ್ದೇಶಕರಾದ ಪದ್ಮಶ್ರೀ
ಹಾಗೂ ಬಂಟ್ವಾಳ ತಹಶೀಲ್ದಾರರಾದ ರಶ್ಮಿ ಎಸ್ ಆರ್ ಇವರ ಜಂಟಿ ನೇತೃತ್ವದಲ್ಲಿ ಕೆಂಪು ಕಲ್ಲು ಕೋರೆ ಗೆ ದಾಳಿ ನಡೆಸಲಾಗಿರುತ್ತದೆ. ಅಧಿಕಾರಿಗಳ ಸಹಕಾರದೊಂದಿಗೆ
ಭಾರೀ ಸೊತ್ತನ್ನು
ಸ್ಥಳಕ್ಕೆ ಕ್ರೇನ್ ತರಿಸಿ ಕ್ರೇನ್ ಸಹಕಾರದಿಂದ ಸ್ವತ್ತುಗಳನ್ನು
ವಶ ಪಡಿಸಿಕೊಂಡು ಗಣಿ ಹಾಗೂ ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರ ಮಾಡಿದರು.
ದಾಳಿಯ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಒಂದು ಲಾರಿ ಕಲ್ಲು, ಕಡಿಯಲು ಉಪಯೋಗಿಸುವ
ದೊಡ್ಡ ಮೆಷಿನ್ ಯಂತ್ರ
ಇನ್ನಿತರ ಕಲ್ಲು ತೆಗೆಯುವ
ಇತರ ಸೊತ್ತುಗಳನ್ನು ವಶ ಪಡಿಸಿಕೊಂಡು ಮುಂದಿನ ತನಿಖೆ ನಡೆಸುತಿದ್ದಾರೆ.
ದಾಳಿಯ ಸಂದರ್ಭದಲ್ಲಿ
ಭೂ ವಿಜ್ಞಾನ ಇಲಾಖೆಯ ಬಿ ಕೆ ಮೂರ್ತಿ, ವಿಟ್ಲ ಠಾಣಾಧಿಕಾರಿಗಳು, ವಿಟ್ಲ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ಕರೋಪಾಡಿ ಗ್ರಾಮ ಲೆಕ್ಕಾಧಿಕಾರಿ ಅನಿಲ್ ಕುಮಾರ್ ಸಿಬ್ಬಂದಿಗಳಾದ ಮೊಯಿದಿಕುಂಞ, ಗಿರೀಶ್, ಶಿವಪ್ರಸಾದ್ ಸಹಕರಿಸಿದರು.

More from the blog

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...

ಪಣೋಲಿಬೈಲು ಕ್ಷೇತ್ರದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ & ಕೋಲ ಸೇವೆ ಇಲ್ಲ

ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆ.12ರಿಂದ ಫೆ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ” ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ನಂದಾವರ ಶ್ರೀ ವಿನಾಯಕ ಶಂಕರ...

ಬೆಳ್ತಂಗಡಿ : ಗ್ರಾಮ ಆಡಳಿತಾಧಿಕಾರಿಗಳಿಂದ 2 ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಮೇರೆಗೆ ಫೆ. 10 ರಿಂದ ಬೆಳ್ತಂಗಡಿಯಲ್ಲಿ...