Saturday, January 31, 2026

ವಿಶಾಖಪಟ್ಟಣಂ: ಗ್ಯಾಸ್ ಸೋರಿಕೆ

ಆಂಧ್ರಪ್ರದೇಶ : ವಿಶಾಖಪಟ್ಟಣಂ ಹೊರವಲಯದ ಎಲ್ ಜಿ ಪಾಲಿಮರ್ಸ್ ಕಂಪನಿಯಲ್ಲಿ ವಿಷಾನಿಲ ಸೋರಿಕೆಯಾದ ಘಟನೆ ನಡೆದಿದೆ.
ಇದರಿಂದಾಗಿ 10 ಮಂದಿ ಬಲಿಯಾಗಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಅಲ್ಲಿನ ಗ್ರಾಮಸ್ಥರಲ್ಲಿ ಗಂಟಲು ಹಾಗೂ ಚರ್ಮದ ಸಮಸ್ಯೆ ಕಾಣಿಸಿಕೊಂಡಿದ್ದು, ಈವರೆಗೆ ಸುಮಾರು ಒಂದೂವರೆ ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ. ಇದೇ ವೇಳೆ 800 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ದುರ್ಘಟನೆಯಿಂದಾಗಿ 5 ಸಾವಿರ ಮಂದಿ ಅಸ್ವಸ್ಥರಾಗಿದ್ದಾರೆಂದು ಹೇಳಲಾಗುತ್ತಿದೆ. ವಿಶಾಖಪಟ್ಟಣಂನಲ್ಲೂ ಭಾರಿ ಆತಂಕ ಮನೆಮಾಡಿದ್ದು, ನಾಗರಿಕರಿಗೆ ಯಾರೂ ಮನೆಗಳಿಂದ ಹೊರಬರಬೇಡಿ, ಮೂಗು ಹಾಗೂ ಬಾಯಿಗೆ ಒದ್ದೆ ಬಟ್ಟೆಗಳನ್ನು ಕಟ್ಟಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಕೊರೊನಾ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ರೈಲುಗಳ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ವಿಶಾಖಪಟ್ಟಣಂ ಮಾರ್ಗದ ಸಂಚಾರವನ್ನು ಬದಲಿಸಲಾಗಿದೆ.

ರಾಷ್ಟ್ರಪತಿ ರಮಾನಾಥ್ ಕೊವಿಂದ್ ಸಂತಾಪ ಸೂಚಿಸಿದ್ದು, ಅವರೆಲ್ಲ ಶೀಘ್ರ ಗುಣಮುಖರಾಗಲೆಂದು ಆಶಿಸಿದ್ದಾರೆ.

ಪ್ರಧಾನಿ ಮೋದಿಯಿಂದ ಪರಿಸ್ಥಿತಿ ಅವಲೋಕನ.ಗ್ಯಾಸ್ ಸೋರಿಕೆ

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...