Thursday, June 26, 2025

ಬಂಟ್ವಾಳ: ಲೋಡೆಡ್ ಸಿಲಿಂಡರ್‌ನಿದ ಖಾಲಿ ಸಿಲಿಂಡರ್‌ಗಳಿಗೆ ಗ್ಯಾಸ್ ತುಂಬಿಸಿ ಮಾರಾಟ ಮಾಡುತ್ತಿದ್ದ ದಂಧೆಯನ್ನು ಪತ್ತೆಹಚ್ಚಿದ ಗ್ರಾಮಸ್ಥರು

ಬಂಟ್ವಾಳ: ಲೋಡೆಡ್ ಸಿಲಿಂಡರ್‌ಗಳಿದ ಖಾಲಿ ಸಿಲಿಂಡರ್‌ಗಳಿಗೆ ಗ್ಯಾಸ್ ತುಂಬಿಸಿ ಮಾರಾಟ ಮಾಡುತ್ತಿದ್ದ ದಂಧೆ ತಾಲೂಕಿನ ವಗ್ಗದ ಕವಳಪಡೂರು ಗ್ರಾಮದ ಅಲಂಪುರಿ ಗುಡ್ಡದಲ್ಲಿ ನಡೆಯುತ್ತಿದ್ದು ಇದನ್ನು ಗ್ರಾಮಸ್ಥರೇ ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಒಂದು ಹರಿದಾಡುತ್ತಿದ್ದು, ಇದು ಅಲಂಪುರಿ ಗುಡ್ಡದಲ್ಲಿ ಖಾಲಿ ಸಿಲಿಂಡರ್‌ಗಳಿಗೆ ಲೋಡೆಡ್ ಸಿಲಿಂಡರ್‌ಗಳಿದ ಗ್ಯಾಸ್ ತುಂಬಿಸಿ ಮಾರಾಟ ಮಾಡುತ್ತಿದ್ದ ದಂಧೆಯನ್ನು ಗ್ರಾಮಸ್ಥರು ಪತ್ತೆ ಹಚ್ಚಿರುವುದಾಗಿ ದೂರಲಾಗಿದೆ.

ಗ್ಯಾಸ್ ಏಜೆನ್ಸಿಯೊಂದರ ಸಿಲಿಂಡರ್ ಡೆಲಿವರಿ ಮಾಡುತ್ತಿರುವ ಸಿಬ್ಬಂದಿಯೇ ಈ ದಂಧೆ ಮಾಡುತ್ತಿದ್ದರು ಎನ್ನಲಾಗಿದೆ. ಡೆಲಿವರಿ ಸಿಬ್ಬಂದಿಯಾದ ರಾಜಸ್ತಾನ ಮೂಲದ ಜಯಪ್ರಕಾಶ್ ಎಂಬಾತನನ್ನು ಸ್ಥಳೀಯರು ಹಿಡಿದಿದ್ದು ಈ ವೇಳೆ ರಾಮ್ ಎಂಬಾತ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಈ ಹಿಂದೆಯೂ ಈ ಇಬ್ಬರು ಇಂಥದ್ದೇ ಕೃತ್ಯದಲ್ಲಿ ತೊಡಗಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇವರಿಬ್ಬರ ಅನುಮಾನಾಸ್ಪದ ವರ್ತನೆಯ ಮೇರೆಗೆ ಸ್ಥಳೀಯರು ಜಮಾಯಿಸಿ ದಂಧೆಯನ್ನು ಪತ್ತೆಹಚ್ಚಿ ಬಯಲಿಗೆಳೆದಿದ್ದಾರೆ ಎನ್ನಲಾಗಿದೆ.

ಪ್ರತೀ ಲೋಡ್ ಸಿಲಿಂಡರ್‌ನಿAದ ಸುಮಾರು ಒಂದರಿAದ ಎರಡು ಕೆ.ಜಿ. ಗ್ಯಾಸ್ ಬೇರೆ ಸಿಲಿಂಡರ್‌ಗಳಿಗೆ ತುಂಬಿಸಿ ಭರ್ತಿ ಮಾಡುತ್ತಿದ್ದರು. ಬಳಿಕ ತುಂಬಿಸಿದ ಸಿಲಿಂಡರ್ ಅನ್ನು ಯಾರಿಗಾದರೂ ಮಾರಾಟ ಮಾಡಿ ಹಣ ಪಡೆಯುತ್ತಿದ್ದರು ಎಂದು ಆರೋಪಿಸಲಾಗಿದೆ.

ಸ್ಥಳಕ್ಕೆ ಗ್ಯಾಸ್ ಏಜೆಂನ್ಸಿಗೆ ಸಂಬಧಿಸಿದವರು ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...